ತಿರುಪ್ಪೂರ್: ತಮಿಳುನಾಡಿನ ತಿರುಪ್ಪೂರ್ಗೆ ಫೆ.27 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಈ ವೇಳೆ ಮೋದಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರ ಎನ್ ಮಣ್ಣ್ ಎನ್ ಮಕ್ಕಳ್ (ನನ್ನ ಮಣ್ಣು, ನನ್ನ ಜನ) ಯಾತ್ರೆ ಮುಕ್ತಾಯಗೊಳ್ಳುವ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. ಅಣ್ಣಾಮಲೈ ಅವರು ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳ ಪ್ರವಾಸವನ್ನು ಪಲ್ಲಡಂ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತಾಯಗೊಳಿಸಲಿದ್ದಾರೆ.
ಈ ರ್ಯಾಲಿಯಲ್ಲಿ 13 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ದೊಡ್ಡ ರೀತಿಯಲ್ಲಿ ಕೊಡುಗೆ ನೀಡಲಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.