ರಿಯಲ್‌ ಹೀರೋ : ಆಟೋ ಚಾಲಕಿಯರ ಸಾಲ ತೀರಿಸಿದ ನಟ ರಾಘವ್ ಲಾರೆನ್ಸ್

ತಮಿಳುನಾಡು:   ಬಡತನವನ್ನು ತುಳಿದು ಮೇಲೆ ಬಂದಿರುವ ತಮಿಳು ಖ್ಯಾತ ನಟ ರಾಘವ್ ಲಾರೆನ್ಸ್ ಅವರು ಸಾಮಾಜಿಕ ಸೇವಗಳಿಂದ ಗುರುತಿಸಿಕೊಂಡಿದ್ದಾರೆ. ಇವರನ್ನೆ ತನ್ನ ಆದರ್ಶ ವ್ಯಕ್ತಿ ಎನ್ನುವ ಕೆಪಿವೈ ಬಾಲಾ ಅವರನ್ನು ಅನುಸರಿಸುತ್ತಾ ಸಮಾಜ ಸಹಾಯ ಮಾಡುತ್ತಿದ್ದಾರೆ.

ರಾಘವ್ ಲಾರೆನ್ಸ್ ಕೆಲವು ದಿನಗಳ ಹಿಂದಷ್ಟೆ ರೈತರಿಗೆ ಹತ್ತು ಟ್ರ್ಯಾಕ್ಟರ್​ಗಳನ್ನು ಉಡುಗೊರೆಯಾಗಿ ನೀಡಿದ್ದರು. ರಾಘವ್​ರ ಈ ಮಹತ್​ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಇದೀಗ ರಾಘವ್ ಲಾರೆನ್ಸ್ ಕೆಲವು ಆಟೋ ಚಾಲಕಿಯರ ಸಾಲ ಮರುಪಾವತಿ ಮಾಡಿ ಮತ್ತೊಮ್ಮೆ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇದೀಗ ಇಬ್ಬರು ಸೇರಿ ಮೊದಲಿಗೆ ಮಹಿಳೆಯೊಬ್ಬರಿಗೆ ಹೊಸ ಆಟೊ ಉಡುಗೊರೆಯಾಗಿ ನೀಡಿದ್ದರು. ಅದೇ ದಿನ ಹಲವು ಆಟೋ ಚಾಲಕಿಯರನ್ನು ಸಹ ರಾಘವ್ ಲಾರೆನ್ಸ್ ಭೇಟಿ ಮಾಡಿದ್ದರು. ಆಗ ಆ ಆಟೋ ಚಾಲಕಿಯರು ತಮ್ಮ ದುಡಿಮೆಯ ಬಹುಪಾಲು ಹಣ ಆಟೋ ಕೊಳ್ಳಲು ತೆಗೆದುಕೊಂಡಿದ್ದ ಸಾಲ ಮರುಪಾವತಿಗೆ ಖರ್ಚಾಗುತ್ತಿರುವುದಾಗಿ ಹೇಳಿಕೊಂಡಿದ್ದರು. ಹಾಗಾಗಿ ಇದೀಗ ರಾಘವ್ ಹಾಗೂ ಬಾಲ ಸೇರಿಕೊಂಡು ಆಟೋ ಚಾಲಕಿಯರ ಬ್ಯಾಂಕ್ ಸಾಲವನ್ನು ತೀರಿಸಿದ್ದಾರೆ.

ಹತ್ತು ಮಂದಿ ಮಹಿಳೆಯರ ಸಾಲ ತೀರಿಸಿ, ಸಾಲ ತೀರಿಸಿದ ದಾಖಲೆಯನ್ನು ಅವರಿಗೆ ಉಡುಗೊರೆಯಾಗಿ ರಾಘವ್ ಲಾರೆನ್ಸ್ ಹಾಗೂ ಬಾಲ ನೀಡಿದ್ದಾರೆ. ರಾಘವ್ ತಮಗೆ ಮಾಡಿದ ಸಹಾಯಕ್ಕೆ ಶ್ರಮಿಕ ಮಹಿಳೆಯರು ಖುಷಿಯಿಂದ ಕಣ್ಣೀರು ಹಾಕಿದ್ದಾರೆ. ಈ ಸನ್ನಿವೇಶದ ವಿಡಿಯೋ ಸೋಷಿಯಲ್ ಮೀಡಿಯಾನಲ್ಲಿ ಇದೀಗ ವೈರಲ್ ಆಗಿದೆ.

 

Nisarga K

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

15 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

30 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

50 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

54 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago