ಚೆನ್ನೈ: ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ನಗರದ ಜನರು ಎದುರಿಸುತ್ತಿರುವ ಸವಾಲಿನ ಪರಿಸ್ಥಿತಿಗಳನ್ನು ಎತ್ತಿ ತೋರಿಸಿದ್ದಾರೆ. ತಾವಿರುವ ಪ್ರದೇಶದಲ್ಲಿ 30 ಗಂಟೆಗಳಿಗೂ ಅಧಿಕ ಕಾಲದಿಂದ ವಿದ್ಯುತ್ ಕಡಿತಗೊಂಡಿದೆ ಎಂದು ತಿಳಿಸಿದ್ದಾರೆ.
ಮಿಚಾಂಗ್ ಚಂಡಮಾರುತವು ತಮಿಳುನಾಡು ಮತ್ತು ನೆರೆಯ ಆಂಧ್ರ ಪ್ರದೇಶದಲ್ಲಿ ವ್ಯಾಪಕ ಹಾನಿಯನ್ನುಂಟುಮಾಡಿದೆ. ಮಂಗಳವಾರ ಮಳೆ ನಿಂತಿದ್ದರಿಂದ ತಮಿಳುನಾಡು ರಾಜ್ಯದ ರಾಜಧಾನಿ ಚೆನ್ನೈ ಸ್ವಲ್ಪ ನಿಟ್ಟುಸಿರು ಬಿಟ್ಟಿದೆ. ಆದರೆ, ಭಾರಿ ಮಳೆಯಿಂದಾಗಿ ನಗರದ ತುಂಬೆಲ್ಲಾ ನೀರು ತುಂಬಿಕೊಂಡಿದ್ದು, ವಿದ್ಯುತ್ ಕಡಿತ ಮತ್ತು ಮೊಬೈಲ್ ನೆಟ್ವರ್ಕ್ಗಳಲ್ಲಿನ ಅಡಚಣೆಯನ್ನು ಎದುರಿಸುತ್ತಿದೆ. ‘ನಾನಿರುವ ಪ್ರದೇಶದಲ್ಲಿ 30 ಗಂಟೆಗಳಿಗೂ ಹೆಚ್ಚು ಕಾಲ ವಿದ್ಯುತ್ ಇಲ್ಲ.
ಹಲವೆಡೆ ಅದೇ ರೀತಿ ಇದೆ ಎಂದು ಊಹಿಸಿ. ನಮಗೆ ಚೆನ್ನೈ ಪ್ರವಾಹದಿಂದ ಬಚಾವಾಗಲು ಯಾವ ಆಯ್ಕೆಗಳಿವೆ ಎಂಬುದು ತಿಳಿದಿಲ್ಲ’ ಎಂದು ಅಶ್ವಿನ್ ಮಂಗಳವಾರ ಟ್ವೀಟ್ ಮಾಡಿದ್ದಾರೆ. ಚೆನ್ನೈ ನಿವಾಸಿಯಾಗಿರುವ ಅಶ್ವಿನ್ ಅವರು ನೀರಿನಿಂದ ತುಂಬಿರುವ ನಗರದ ಹಲವಾರು ವಿಡಿಯೋ ತುಣುಕುಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ‘ಇನ್ನೊಂದು ದಿನ ಎಲ್ಲರೂ ಸುರಕ್ಷಿತವಾಗಿರಿ, ಮಳೆ ನಿಂತರೂ, ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
#ChennaiRains2023 #Michaung’ ಎಂದು ಸ್ಪಿನ್ನರ್ ಪೋಸ್ಟ್ ಮಾಡಿದ್ದು, ಹಾನಿಗೊಳಗಾದ ರಸ್ತೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
Hang tight for another day everyone🙏
Even if the rain stops, recovery is going to take a while. #ChennaiRains2023 #Michaung pic.twitter.com/QsnkuxuXx3— Ashwin 🇮🇳 (@ashwinravi99) December 4, 2023