ಟೊಮೆಟೊ ದರ ಏರಿಕೆ: ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದ ಸರ್ಕಾರ

ತಮಿಳುನಾಡು: ತಮಿಳುನಾಡಿನಾದ್ಯಂತ ರಾಜ್ಯ ಸರ್ಕಾರ ನಡೆಸುತ್ತಿರುವ ಫಾರ್ಮ್ ಫ್ರೆಶ್ ಔಟ್‌ಲೆಟ್‌ಗಳಲ್ಲಿ ಟೊಮೆಟೊ ಮಾರಾಟ ಮಾಡಲು ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತೊಂದರೆಯುಂಟಾಗದಂತ ಟೊಮೆಟೊವನ್ನು ಎಫ್‌ಎಫ್‌ಒಗಳಲ್ಲಿ ಕೆಜಿಗೆ 60 ರೂ.ಗೆ ಮಾರಾಟ ಮಾಡಲಾಗುವುದು.

ತಮಿಳುನಾಡಿನಲ್ಲಿ ಸಾಮಾನ್ಯ ಖರೀದಿಗಿಂತ ಶೇ.15ರಷ್ಟು ಹೆಚ್ಚು ಟೊಮೆಟೊ ಖರೀದಿಸಲಾಗಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ರಕ್ಷಣಾ ಇಲಾಖೆ ಸಚಿವ ಪೆರಿಯಕರುಪ್ಪನ್ ಹೇಳಿದ್ದಾರೆ. ತಮಿಳುನಾಡಿನ 62 ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟವಾಗಲಿದೆ.

ಎಲ್ಲಾ ತರಕಾರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದ ಸಚಿವರು ಅಗತ್ಯಕ್ಕೆ ತಕ್ಕಂತೆ ಹೊರರಾಜ್ಯಗಳಿಂದ ಟೊಮೆಟೊ ಖರೀದಿಗೆ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ತರಕಾರಿ ಬೆಲೆ ಏರಿಕೆ ಮುಂದುವರಿದರೆ ಪಡಿತರ ಅಂಗಡಿಗಳಲ್ಲೂ ಕಡಿಮೆ ಬೆಲೆಗೆ ತರಕಾರಿ ಮಾರಲು ಸಿದ್ಧ. ಇನ್ನು 3ರಿಂದ 4 ದಿನಗಳಲ್ಲಿ ಟೊಮೆಟೊ ಬೆಲೆ ಸಂಪೂರ್ಣ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಇತ್ತ ದೇಶದ ಪ್ರಮುಖ ನಗರಗಳಲ್ಲಿ ಟೊಮೇಟೊ ಬೆಲೆ 100 ರೂಪಾಯಿಗೂ ಹೆಚ್ಚಾಗಿದ್ದು, ಟೊಮೆಟೊ ಬೆಲೆ ಏರಿಕೆಯು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ತಿಳಿಸಿದ್ದಾರೆ.

ಕಳೆದ ವಾರ 40-50 ರೂಪಾಯಿ ಆಸುಪಾಸಿನಲ್ಲಿದ್ದ ಟೊಮ್ಯಾಟೊ ಬೆಲೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ. ದೇಶದ ನಾಲ್ಕು ಮಹಾನಗರಗಳಾದ, ದೆಹಲಿಯಲ್ಲಿ ಟೊಮೆಟೊ ಬೆಲೆ ಕೆಜಿಗೆ 60 ರೂ., ಮುಂಬೈ ಕೆಜಿಗೆ 42 ರೂ., ಕೋಲ್ಕತ್ತಾ ಕೆಜಿಗೆ 75 ರೂ. ಮತ್ತು ಚೆನ್ನೈನಲ್ಲಿ ಕೆಜಿಗೆ 67 ರೂ. ಇದೆ.

 

Ashitha S

Recent Posts

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

4 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

5 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

10 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

21 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

33 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

38 mins ago