ತಮಿಳುನಾಡು

ಬಿಟಿಎಸ್ ಪಾಪ್​ ಸಿಂಗರ್ಸ್ ಕಾಣುವ ತವಕ​ : ಕೊರಿಯಾದತ್ತ ಹೊರಟ ಹೆಣ್ಣು ಮಕ್ಕಳು

ತಮಿಳುನಾಡು: ಇಲ್ಲಿನ ಕರೂರ್​​ ಮೂಲದ ಹದಿಹರೆಯದ 3 ಮಕ್ಕಳು ಬಿಟಿಎಸ್​ ತಂಡವನ್ನು ಭೇಟಿ ಮಾಡಲು ದಕ್ಷಿಣ ಕೊರಿಯಾಗೆ ಪ್ರಯಾಣ ಬೆಳೆಸಿದ ಘಟನೆ ಬೆಳಕಿಗೆ ಬಂದಿದೆ. ಮೂವರು ಮಕ್ಕಳು ಬಿಟಿಎಸ್​ನ ದೊಡ್ಡ ಅಭಿಮಾನಿಗಳಾಗಿದ್ದು, ಕೊರಿಯಾದ ಸಿಯೋಲ್​ ಕಡೆಗೆ ಮೂವರು ಮಕ್ಕಳು ಪ್ರಯಾಣ ಬೆಳೆಸಿದ್ದಾರೆ.

ಅಚ್ಚರಿಯ ಸಂಗತಿ ಎಂದರೆ ಪಿಗ್ಗಿ ಬ್ಯಾಂಕ್​ನಲ್ಲಿ ಉಳಿಸಿದ 14 ಸಾವಿರ ರೂಪಾಯಿಯೊಂದಿಗೆ ಸಿಯೋಲ್​ ಕಡೆಗೆ ಪ್ರಯಾಣ ಬೆಳೆಸಲು ಮುಂದಾಗಿದ್ದರು. ಆದರೀಗ ಅವರನ್ನು ಪೊಲೀಸರು ಪತ್ತೆಹಚ್ಚುವ ಮೂಲಕ ಪೋಷಕರಿಗೆ ಒಪ್ಪಿಸಿದ್ದಾರೆ.

13 ವರ್ಷದ ಮೂವರು ಹೆಣ್ಣು ಮಕ್ಕಳು ಮಧ್ಯಮ ಕುಟುಂಬಕ್ಕೆ ಸೇರಿದವರಾಗಿದ್ದು,ಕೊರಿಯಾಗೆ ಹೋಗಬೇಕೆಂದು ಈರೋಡ್​ ಕಡೆಗೆ ಪ್ರಯಾಣ ಬೆಳೆಸಿದ್ದರು. ಇವರು ದಕ್ಷಿಣ ಕೊರಿಯಾಗೆ ಹಡಗಿನಲ್ಲಿ ಹೋಗುವ ಯೋಚನೆ ಮಾಡಿಕೊಂಡಿದ್ದರು. ಆದರೆ 5ರಂದು ವಿಶಾಖಪಟ್ಟಣ ಕಡೆಗೆ ರೈಲು ಹತ್ತಿ ಆಹಾರ ಖರೀದಿಸಲು ಕಟಪಾಡಿ ಬಳಿ ಇಳಿದರು. ಅತ್ತ ಮಕ್ಕಳ ಕುಟುಂಬದವರು ನಾಪತ್ತೆ ದೂರು ದಾಖಲಿಸಿ ಹುಡುಕಾಡುತ್ತಿದ್ದರು. ಕೊನೆಗೆ ಪೊಲೀಸರು ಕಟಪಾಡಿ ಬಳಿ ಮಕ್ಕಳನ್ನು ಪತ್ತೆಹಚ್ಚಿ ರಕ್ಷಿಸಿದ್ದಾರೆ.

Ashitha S

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

20 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

30 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago