ತಮಿಳುನಾಡು: ಕರ್ನಾಟಕದಿಂದ ತಮಿಳುನಾಡಿನ ಊರಪಕ್ಕಂ ತೆರಳಿದ್ದ ಮೂವರು ಬಾಲಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ತಮಿಳುನಾಡಿನ ಊರಪಕ್ಕಂನಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ರವಿ, ಸುರೇಶ್ ಹಾಗು ಮಂಜುನಾಥನ್ ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ನಲ್ಲಿ ಮಾತನಾಡುತ್ತ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇವರಲ್ಲಿ ಇಬ್ಬರು ಸಹೋದರು ಆಗಿದ್ದು, ಪೊಲೀಸರು ಘಟನ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.