ಧರ್ಮಪುರಿ: ಕಾಳಿಯಮ್ಮನ ದೇವಸ್ಥಾನದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ.
ವೈಶಾಖಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಮೂವತ್ತು ಅಡಿ ಎತ್ತರದ ಅಲಂಕೃತ ರಥವನ್ನು ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಎಳೆಯುವಾಗ ಈ ದುರ್ಘಟನೆ ಸಂಭವಿಸಿದೆ.
ಸಿ. ಮನೋಹರನ್(57) ಮತ್ತು ಸರವಣನ್(50) ಮೃತಪಟ್ಟ ದುರ್ದೈವಿಗಳಾಗಿದ್ದು, ಗಾಯಗೊಂಡ ನಾಲ್ವರನ್ನು ಧರ್ಮಪುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿರುವವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಘೋಷಿಸಿದ್ದಾರೆ.