News Karnataka Kannada
Monday, April 29 2024
ತಮಿಳುನಾಡು

ಪ್ರಧಾನಿ ಮೋದಿ ವಿರುದ್ಧ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಅವರು ಈಗ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Photo Credit : NewsKarnataka

ಚೆನ್ನೈ: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಅವರು ಈಗ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಾಥಪುರಂ ಮತ್ತು ಥೆಣಿಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್ಮೋ ದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಿಯಾದ ಪರಿಹಾರ ನೀಡುತ್ತಿಲ್ಲ ಅನ್ನೋ ವಿಚಾರ ಲೋಕಸಭಾ ಚುನಾವಣೆಯಲ್ಲಿ ಪ್ರಚಾರದ ಅಸ್ತ್ರವಾಗಿದೆ. ಈ ಕುರಿತು ಮಾತನಾಡಿದ ಸ್ಟಾಲಿನ್, ನಾವು ಇನ್ಮುಂದೆ ನರೇಂದ್ರ ಮೋದಿ ಅವರನ್ನು 28 ಪೈಸೆ ಪಿಎಂ ಎಂದು ಕರೆಯುತ್ತೇವೆ ಎಂದಿದ್ದಾರೆ.

ನರೇಂದ್ರ ಮೋದಿ ಅವರು ಚುನಾವಣೆಯ ಸಮಯದಲ್ಲಿ ಮಾತ್ರ ತಮಿಳುನಾಡಿಗೆ ಭೇಟಿ ನೀಡುತ್ತಾರೆ. ತಮಿಳುನಾಡು ರಾಜ್ಯ ಕೇಂದ್ರ ಸರ್ಕಾರಕ್ಕೆ ನೀಡುವ ತೆರಿಗೆ ಹಣದಲ್ಲಿ ಪ್ರತಿಯೊಂದು ರೂಪಾಯಿಗೆ ಕೇವಲ 28 ಪೈಸೆಯನ್ನು ಮಾತ್ರ ನೀಡುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಮಾಡುತ್ತಿದೆ. ಬಿಜೆಪಿ ಆಡಳಿತ ರಾಜ್ಯಗಳಿಗೆ ಒಂದು ಪರಿಹಾರ ಹಾಗೂ ಬಿಜೆಪಿಯೇತರ ರಾಜ್ಯಗಳಿಗೆ ಮತ್ತೊಂದು ಪ್ರಮಾಣ ಅನುದಾನ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನು ನಾವು 28 ಪೈಸೆ ಪಿಎಂ ಎಂದೇ ಕರೆಯುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಪಿ ನೇತೃತ್ವದ ಕೇಂದ್ರ ಸರ್ಕಾರ NEP ಜಾರಿ ಮಾಡಿ ತಮಿಳುನಾಡು ಮಕ್ಕಳ ಭವಿಷ್ಯ ಹಾಳು ಮಾಡಲು ಮುಂದಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಮಿಳುನಾಡಿಗೆ ಭಾರೀ ಅನ್ಯಾಯವಾಗಿದೆ. ಕೇಂದ್ರದ ತಾರತಮ್ಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು