ಚೆನ್ನೈ: ಕಾಡುಗಳ್ಳ, ಆನೆ ದಂತ ಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರು ಲೋಕಸಭೆ ಚುನಾವಣೆಯಲ್ಲಿ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಲ್ಲಿ ನಾಮ್ ತಮಿಳರ್ ಕಚ್ಚಿ ಪಕ್ಷದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ವಿದ್ಯಾರಾಣಿ ಅವರು ಎನ್ಟಿಕೆ ಪಕ್ಷವನ್ನು ಸೇರ್ಪಡೆಯಾಗಿದ್ದರು.
ಈ ಕುರಿತು ಎನ್ಟಿಕೆ ಪಕ್ಷದ ಮುಖ್ಯಸ್ಥ ಸೀಮನ್ ಅವರೇ ಘೋಷಣೆ ಮಾಡಿದ್ದಾರೆ.
ನಟ-ನಿರ್ದೇಶಕ ಸೀಮನ್ ನೇತೃತ್ವದ ಪಕ್ಷ ಸೇರಿದ್ದರು. “ವಿದ್ಯಾರಾಣಿ ಅವರು ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಲ್ಲಿ ಎನ್ಟಿಕೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ” ಎಂಬುದಾಗಿ ಎನ್ಟಿಕೆ ಮುಖ್ಯಸ್ಥ ಸೀಮನ್ ಮಾಹಿತಿ ನೀಡಿದ್ದಾರೆ.
ವಿದ್ಯಾರಾಣಿ ಅವರು ವೃತ್ತಿಯಿಂದ ವಕೀಲರಾಗಿದ್ದಾರೆ. ಇವರು ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಅಧ್ಯಯನ ಮಾಡಿದ್ದಾರೆ. ಅಷ್ಟೇ ಅಲ್ಲ, ಕೃಷ್ಣಗಿರಿಯಲ್ಲಿ ಇವರು ಶಾಲೆಯೊಂದನ್ನು ಮುನ್ನಡೆಸುತ್ತಿದ್ದಾರೆ. ಆ ಮೂಲಕ ಬಡಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. 2020ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ವಿದ್ಯಾರಾಣಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಘಟಕದ ಉಪಾಧ್ಯಕ್ಷೆಯಾಗಿದ್ದರು. ಬಳಿಕ ಇವರು ಎನ್ಟಿಕೆ ಸೇರ್ಪಡೆಯಾಗಿದ್ದಾರೆ.