ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ದಿನವಾದ ಶನಿವಾರ ಪ್ರತಿಭಟನೆ ಮುಂದುವರೆದಿದ್ದು, ಕಾಂಗ್ರೆಸ್ಸಿಗರು ಕಲ್ಪೆಟ್ಟಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಸುಟ್ಟುಹಾಕಿದ್ದಾರೆ.
ಕಲ್ಪೆಟ್ಟಾ (ವಯನಾಡು) ಪಕ್ಷದ ಶಾಸಕ ಟಿ.ಸಿದ್ದೀಕ್ ನೇತೃತ್ವದಲ್ಲಿ ಬಿಎಸ್ಎನ್ಎಲ್ ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಕಲ್ಪೆಟ್ಟಾದಲ್ಲಿ, ಕೋಪಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ಹಿಂಸಾಚಾರಕ್ಕೆ ತಿರುಗಿತು. ಮುಖಂಡ ಸಿದ್ದಿಕ್ ಹಾಗೂ ಇತರ ಮುಖಂಡರನ್ನು ಬಂಧಿಸಿ ಠಾಣೆಗೆ ಕರೆದೊಯ್ಯಲಾಯಿತು.
ಪ್ರತಿಭಟನಾಕಾರರು ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಇದೇ ರೀತಿಯ ಪ್ರತಿಭಟನೆಗಳು ಲೋಕಸಭಾ ಕ್ಷೇತ್ರದಾದ್ಯಂತ ಸುಲ್ತಾನ್ ಬತ್ತೇರಿ, ಮಾನಂತವಾಡಿ ಮತ್ತು ಸಣ್ಣ ಪಟ್ಟಣಗಳಲ್ಲಿ ನಡೆಯಿತು. ಹಲವಾರು ಮಹಿಳೆಯರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ತಿರುವನಂತಪುರಂ ಕಾರ್ಪೊರೇಷನ್ ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ಸದಸ್ಯರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು.