News Karnataka Kannada
Sunday, April 28 2024
ತಮಿಳುನಾಡು

ಪುತ್ರನ ಕಾಲೇಜು ಫೀಸ್‌ ಹೊಂದಿಸಲು ಬಸ್ಸಿನಡಿಗೆ ಬಿದ್ದು ಸತ್ತ ಮಹಿಳೆ

ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ  ಮೃತಪಟ್ಟಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತದ ದೂತಾವಾಸ  ತಿಳಿಸಿದೆ.
Photo Credit : Pixabay

ಚೆನ್ನೈ: ತಾನು ಸತ್ತರೆ ಮಗನ ಕಾಲೇಜು ಫೀಸನ್ನು ಸರಕಾರ ಭರಿಸುತ್ತದೆಂದು ಯಾರೋ ಹೇಳಿದ ಮಾತು ನಂಬಿದ ಬಡ ತಾಯೊಯೊಬ್ಬಳು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಸಂಭವಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಹೇಗೆ ನಡೆಯಿತು: ಸೇಲಂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೈರ್ಮಲ್ಯ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಪಾಪಾತಿ (45) ಜೀವ ಕಳೆದುಕೊಂಡಿರುವ ಮಹಿಳೆ. ಜೂ. 28ರಂದು ಮಹಿಳೆ ಆತ್ಮಾಹುತಿ ಮಾಡಿಕೊಂಡಿದ್ದರೂ ಸಾವಿನ ಕಾರಣ ತಡವಾಗಿ ಬೆಳಕಿಗೆ ಬಂದಿದೆ.

15 ವರ್ಷಗಳಿಂದ ಗಂಡನಿಂದ ದೂರವಾಗಿ ಮಗನೊಂದಿಗೆ ವಾಸವಾಗಿರುವ ಮಹಿಳೆ ಬಡತನದಿಂದಾಗಿ ಬಹಳ ಕಷ್ಟ ಅನುಭವಿಸುತ್ತಿದ್ದರು. ಒಬ್ಬನೇ ಮಗನ ಭವಿಷ್ಯ ಉಜ್ವಲವಾಗಬೇಕೆಂದು ಬಯಸುತ್ತಿದ್ದ ಮಹಿಳೆಗೆ ಕಾಲೇಜು ಶುಲ್ಕ ಕಟ್ಟಲು ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಆಗ ಯಾರೋ ಆಕೆಗೆ ನೀನು ಅಪಘಾತದಲ್ಲಿ ಸತ್ತರೆ ಸರಕಾರ ಕೊಡುವ ಪರಿಹಾರದ ಹಣದಲ್ಲಿ ಮಗನ ಕಾಲೇಜು ಫೀಸ್‌ ಕಟ್ಟಬಹುದು, ಅವನ ಕಷ್ಟಗಳು ದೂರವಾಗುತ್ತವೆ ಎಂದು ಹೇಳಿದ್ದಾರೆ.

ಇದನ್ನು ನಿಜವೆಂದು ನಂಬಿದ ಮಹಿಳೆ ವೇಗವಾಗಿ ಬರುತ್ತಿದ್ದ ಬಸ್ಸಿನ ಮುಂದೆ ಹೋಗಿ ನಿಂತಿದ್ದಾಳೆ. ಚಾಲಕನಿಗೆ ವೇಗ ನಿಯಂತ್ರಿಸಲು ಸಾಧ್ಯವಾಗದೆ ಬಸ್‌ ಆಕೆಯ ಮೇಲೆ ಹರಿದು ಹೋಗಿದೆ. ಬದುಕಿನ ಕಷ್ಟಗಳಿಂದ ಹತಾಶರಾಗಿದ್ದ ಈ ಮಹಿಳೆ ಬಸ್ಸಿನಡಿಗೆ ಬೀಳುವುದಕ್ಕೂ ಕೆಲವು ನಿಮಿಷ ಮೊದಲು ಮತ್ತೊಂದು ಬಸ್ಸಿ ನಡಿಗೆ ಬೀಳುವ ಪ್ರಯತ್ನ ಮಾಡಿದ್ದರು. ಆದರೆ ಆಗ ಸ್ಕೂಟರ್‌ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಎದ್ದು ಮತ್ತೊಂದು ಬಸ್ಸಿನಡಿಗೆ ಬಿದ್ದಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು