News Karnataka Kannada
Thursday, May 09 2024
ದೇಶ

ತೆಲಂಗಾಣದಲ್ಲಿ ಅಪಘಾತ: ಬೆಳಗಾವಿ ಮೂಲದ ಒಂದೇ ಕಟುಂಬದವರು ಮೃತ್ಯು

Car catches fire during match promotional event
Photo Credit : News Kannada

ತೆಲಂಗಾಣ: ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

ಇಂದು (.15) ಬೆಳಗಿನ ಜಾವ ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕ್ರೂಸರ್​ನಲ್ಲಿದ್ದ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಚಾಲಕ ಹನುಮಂತ ಜಾಧವ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಇಂದು ಮನೆಗೆ ವಾಪಸ್ ಆಗುತ್ತಿದ್ದರು. ಆದರೆ ಈ ವೇಳೆ ಅಪಘಾತವಾಗಿದ್ದು, ಮನೆಗೆ ಬರುತ್ತಿದ್ದವರ ಪೈಕಿ ಐವರು ಮಸಣ ಸೇರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು