ಹೈದರಾಬಾದ್: ನಗರದ ಹೊರವಲಯದ ಅಬ್ದುಲ್ಲಾಪುರ್ಮೆಟ್ನಲ್ಲಿ ನಡೆದಿದ್ದ ಜೋಡಿ ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಮಹಿಳೆಯ ಪತಿ ಮತ್ತು ಅವನ ಸಹಚರರು ಭಾಗಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಅಬ್ದುಲ್ಲಾಪುರ್ಮೆಟ್ನಲ್ಲಿ ಎರಡು ಬೆತ್ತಲೆ ಶವ ಪತ್ತೆಯಾಗಿದ್ದವು.
ಘಟನೆ ನಡೆದ ಮೂರು ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಯಶವಂತ್ (22) ಮತ್ತು ವಿವಾಹಿತೆ ಜ್ಯೋತಿ (30) ಎಂದು ಗುರುತಿಸಲಾಗಿದೆ.
ಇಲ್ಲಿನ ವಾರಸಿಗೂಡಾದಲ್ಲಿ ಜ್ಯೋತಿ ಕುಟುಂಬ ವಾಸವಾಗಿತ್ತು. ಈಕೆಯ ಪತಿ ಸ್ಟೀಲ್ ಸಾಮಗ್ರಿಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳೂ ಸಹ ಇದ್ದಾರೆ. ಇದೇ ಪ್ರದೇಶದಲ್ಲಿ ಯಡ್ಲ ಯಶವಂತ್ ಎಂಬ ಯುವಕನ ಕುಟುಂಬವೂ ವಾಸಿಸುತ್ತಿದೆ. ಯಶವಂತ್ ಕ್ಯಾಬ್ ಚಾಲಕನಾಗಿದ್ದಾನೆ.
ಕೆಲವು ದಿನಗಳ ಹಿಂದೆ ಯಶವಂತ್ ಮತ್ತು ಜ್ಯೋತಿ ನಡುವೆ ಪರಿಚಯವಾಗಿದೆ. ಇದು ವಿವಾಹೇತರ ಸಂಬಂಧಕ್ಕೆ ತಿರುಗಿದೆ. ಇದನ್ನರಿತ ಜ್ಯೋತಿಯ ಪತಿ ಯಶ್ವಂತ್ನಿಂದ ದೂರವಿರುವಂತೆ ಹಲವು ಸಂದರ್ಭಗಳಲ್ಲಿ ಎಚ್ಚರಿಕೆ ನೀಡಿದ್ದನಂತೆ. ಆದರೂ, ಎರಡು ಮಕ್ಕಳ ತಾಯಿಯಾಗಿರುವ ಮಹಿಳೆ ಚಾಲಕನೊಂದಿಗೆ ಪ್ರಣಯ ಮುಂದುವರಿಸಿದ್ದಾಳೆ. ಇದರಿಂದ ಕೋಪಗೊಂಡ ಆಕೆಯ ಪತಿ ಅವರನ್ನು ಕೊಲ್ಲಲು ನಿರ್ಧರಿಸಿದ್ದಾರೆ.
ಭಾನುವಾರ ಯಶ್ವಂತ್ ಮತ್ತು ಜ್ಯೋತಿ ಸ್ಕೂಟರ್ನಲ್ಲಿ ಹೊರಗೆ ಹೋಗುತ್ತಿರುವುದನ್ನು ಪತಿ ನೋಡಿದ್ದಾನೆ. ಈ ವೇಳೆ ಮತ್ತೊಂದು ವಾಹನದಲ್ಲಿ ಅವರನ್ನು ಹಿಂಬಾಲಿಸಿದರು ಮತ್ತು ಅಂತಿಮವಾಗಿ ಅವರು ಅಬ್ದುಲ್ಲಾಪುರ್ಮೆಟ್ನ ಕೊತಗುಡೆಮ್ ಗ್ರಾಮದ ಪ್ರತ್ಯೇಕ ಸ್ಥಳಕ್ಕೆ ತಲುಪಿದರು.
ಈ ವೇಳೆ ಪೊದೆಯೊಳಗೆ ಹೋದ ಯಶ್ವಂತ್ ಮತ್ತು ಜ್ಯೋತಿ ಏಕಾಂತದಲ್ಲಿ ಕಾಲ ಕಳೆಯುತ್ತಿದ್ದರು. ಇದನ್ನು ಪತಿ ಪ್ರತ್ಯಕ್ಷವಾಗಿ ನೋಡಿ ಕೋಪ ತಡೆಯಲಾರದೆ ಪಕ್ಕದಲ್ಲಿದ್ದ ಕಲ್ಲನ್ನು ಜ್ಯೋತಿ ತಲೆ ಮೇಲೆ ಎತ್ತಾಕಿದ್ದಾನೆ. ಇಷ್ಟಕ್ಕೂ ಸುಮ್ಮನಾಗದ ಆತ ತಾನು ತಂದಿದ್ದ ಮೊಂಡಾದ ವಸ್ತುವಿನಿಂದ ಇರಿದು ಯಶವಂತ್ನನ್ನೂ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ಕೋಪದಿಂದ ಯಶವಂತ್ನ ಗುಪ್ತಾಂಗವನ್ನೂ ಛಿದ್ರಗೊಳಿಸಿದ್ದಾನೆ. ಈ ವೇಳೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಮೃತದೇಹಗಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳವಾರ ಶವಗಳು ಪತ್ತೆಯಾದವು. ಈ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…