Categories: ತೆಲಂಗಾಣ

ಅಪ್ರಾಪ್ತ ಮಗಳ ಮೇಲೆಯೇ ತಂದೆಯ ನಿರಂತರ ಅತ್ಯಾಚಾರ

ವಿಕಾರಾಬಾದ್: ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ಮೂರು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿರುವ ಹೇಯ ಕೃತ್ಯ ತೆಲಂಗಾಣದ ವಿಕಾರಾಬಾದ್​​ನ ಮೊಮಿನ್​​ಪೇಟ್​​​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಗಾರೆಡ್ಡಿಯ ಪತಂಚೆರುವುದಲ್ಲಿ ಇವರು ವಾಸವಾಗಿದ್ದರು. 15 ವರ್ಷದ ಬಾಲಕಿ ಕಸ್ತೂರಿ ಬಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕೆಲ ತಿಂಗಳ ಹಿಂದೆ ಕೋವಿಡ್‌ ಲಾಕ್​ಡೌನ್​ ಆಗಿದ್ದ ಕಾರಣ ಬಾಲಕಿ ಪೋಷಕರೊಂದಿಗೆ ಉಳಿದುಕೊಳ್ಳಲು ಮನಗೆ ಆಗಮಿಸಿದ್ದಾಳೆ.

ಪ್ರತಿದಿನ ಕೆಲಸಕ್ಕೆ ಹೋಗುತ್ತಿದ್ದ ಬಾಲಕಿಯ ತಂದೆ ಮಧ್ಯಾಹ್ನ ಊಟಕ್ಕಾಗಿ ಮನೆಗೆ ಬರುತ್ತಿದ್ದ. ಆದರೆ ಒಂದು ದಿನ ಮಗಳು ಮನೆಯಲ್ಲಿ ಒಬ್ಬಳೇ ಇದ್ದದ್ದನ್ನು ಕಂಡು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಘಟನೆ ಸಂಬಂಧ ಆಕೆಗೆ ಪ್ರಾಣ ಬೆದರಿಕೆ ಹಾಕಿ ದುಷ್ಕೃತ್ಯ ಮುಂದುವರೆಸಿದ್ದಾನೆ ಎನ್ನಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಬಾಲಕಿಯ ಅಜ್ಜಿ ತೀರಿಕೊಂಡಿದ್ದು, ವಿಕಾರಾಬಾದ್​​ ಜಿಲ್ಲೆಯ ಮೊಮಿನ್​ಪೇಟೆಗೆ ಬಾಲಕಿ ತೆರಳಿದ್ದಳು. ಈ ವೇಳೆ ಜ್ವರದಿಂದ ಬಳಲುತ್ತಿದ್ದ ಮಗಳನ್ನು ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಆಗಿರುವುದು ತಿಳಿದಿದೆ. ನಂತರ ಬಾಲಕಿ ತಂದೆಯ ವಿಕೃತ ಮನಸ್ಥಿತಿ ಬಗ್ಗೆ ವಿವರಿಸಿದ್ದಾಳೆ.

ಈ ಸಂಬಂಧ ಬಾಲಕಿ ತಾಯಿ, ಪಾಪಿ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲಕಿಯ ತಂದೆ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೊಮಿನ್ ಪೇಟೆಯ ಸರ್ಕಲ್ ಇನ್ಸ್‌ಪೆಕ್ಟರ್ ಎಂ ವೆಂಕಟೇಶಂ ಅವರು ತಿಳಿಸಿದ್ದಾರೆ.

Gayathri SG

Recent Posts

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

10 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

16 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

31 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

47 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

1 hour ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

1 hour ago