ಹೈದರಾಬಾದ್: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಜೊತೆ ಕಾಂಗ್ರೆಸ್ ಮೈತ್ರಿ ಇಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಪಕ್ಷದ ಕಾರ್ಯಾಧ್ಯಕ್ಷ, ಸಚಿವ ಕೆ.ಟಿ.ರಾಮರಾವ್ (ಕೆಟಿಆರ್) ಶನಿವಾರ ತೀವ್ರ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸುವ ಯಾವುದಾದರು ರಾಜಕೀಯ ಪಕ್ಷ ಭಾರತದಲ್ಲಿ ಇದೆಯೇ?’ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಮಗನೂ ಆದ ಕೆಟಿಆರ್ ಪ್ರಶ್ನೆ ಮಾಡಿದ್ದಾರೆ.
ವಾರಂಗಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೆಟಿಆರ್ ಈ ರೀತಿ ಪ್ರಶ್ನೆ ಕೇಳಿದರು. ಇದಕ್ಕೂ ಹಿಂದೆ ರಾಹುಲ್ ಗಾಂಧಿ ಅವರು ವಾರಂಗಲ್ನಲ್ಲೇ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದರು.
ಕಾಂಗ್ರೆಸ್ ಧೂಳೀಪಟವಾಗಿದೆ ಎಂದು ವ್ಯಂಗ್ಯವಾಡಿದ ಟಿಆರ್ಎಸ್ ನಾಯಕ ಕೆಟಿಆರ್, ಆ ಪಕ್ಷದೊಂದಿಗೆ ಯಾರು ಮೈತ್ರಿ ಮಾಡಿಕೊಳ್ಳಲು ಬಯಸುತ್ತಾರೆ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
ಸ್ವಂತ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗದ ರಾಹುಲ್ ಅವರು ತೆಲಂಗಾಣ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲ್ಲುವಂತೆ ಮಾಡುತ್ತಾರೆಯೇ ಎಂದು ಕೆಟಿಆರ್ ಮತ್ತೊಂದು ಪ್ರಶ್ನೆ ಎಸೆದರು.
ರಾಹುಲ್ ಗಾಂಧಿ ಅವರು ತೆಲಂಗಾಣದ ಕಾಂಗ್ರೆಸ್ ಕೇಂದ್ರ ಕಚೇರಿ ‘ಗಾಂಧಿ ಭವನ’ವನ್ನು ‘ಗೋಡ್ಸೆ’ಗೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಯಾರೋ ಬರೆದುಕೊಟ್ಟಿದ್ದನ್ನು ಇಲ್ಲಿ ಬಂದು ಓದಿದ್ದಾರೆ ಎಂದು ಕೆಟಿಆರ್ ಕುಹಕವಾಡಿದ್ದಾರೆ.
ತೆಲಂಗಾಣದಲ್ಲಿ ರೈತರ ಆತ್ಮಹತ್ಯೆ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಕೆಟಿಆರ್ ತಿರುಗೇಟು ನೀಡಿದರು. ‘ತೆಲಂಗಾಣದಲ್ಲಿ ಅತಿ ಕಡಿಮೆ ಆತ್ಮಹತ್ಯೆಗಳು ಸಂಭವಿಸಿವೆ ಎಂದು ಕೇಂದ್ರ ಸರ್ಕಾರವೇ ಘೋಷಿಸಿದೆ. ಕಾಂಗ್ರೆಸ್ಗೆ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಪಂಜಾಬ್ ಚುನಾವಣೆಯಲ್ಲಿ ಅವರು ಏಕೆ ಸೋತರು’ ಎಂದು ಕೆಟಿಆರ್ ಪ್ರಶ್ನಿಸಿದರು.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.