ತೆಲಂಗಾಣ: ವಿಧಾನಸಭಾ ಚುನಾವಣಾ ಪ್ರಚಾರ ನಡೆಯುತ್ತಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಧಿಕಾರ ಪಡೆದಿರುವ ಕಾಂಗ್ರೆಸ್ ಇದೀಗ ಪಕ್ಕದ ತೆಲಂಗಾಣ ರಾಜ್ಯದಲ್ಲೂ ಅಧಿಕಾರ ಪಡೆಯಲು ಕಾಂಗ್ರೆಸ್ನ 6 ಗ್ಯಾರಂಟಿ ಘೋಷಣೆ ಮಾಡಿದೆ.
ಪ್ರತಿ ತಿಂಗಳು ಮನೆಯೊಡತಿಗೆ 2,500 ರೂಪಾಯಿ, ,ಪ್ರತಿ ಹೆಣ್ಣು ಮಗುವಿನ ಖಾತೆಗೆ ವರ್ಷಕ್ಕೆ 30,000 ರೂಪಾಯಿ, ಪಿಂಚಣಿ ಮೊತ್ತ 2,000 ರೂಪಾಯಿ ನಿಂದ 4,000 ರೂಪಾಯಿಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ನೆರವು, ಬಡವರಿಗೆ 200 ಯೂನಿಟ್ವರೆಗೂ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.
ಈ 6 ಗ್ಯಾರಂಟಿಗಳ ಜೊತೆಗೆ ತೆಲಂಗಾಣ ಕಾಂಗ್ರೆಸ್ ಇದೀಗ ಮತ್ತೆ ರೈತರಿಗೆ ಮತ್ತೊಂದು ಗುಡ್ನ್ಯೂಸ್ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ 24 ಗಂಟೆ ಉಚಿತ ವಿದ್ಯುತ್ ನೀಡತ್ತೇವೆ ಎಂದು ಬುಧವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇವಲ 3 ಗಂಟೆ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದಾರೆ. ಆದರೆ ನಾವು 24 ಗಂಟೆ ನೀಡುತ್ತೇವೆ ಎಂದು ಬೀಗುತ್ತಿದ್ದ ಬಿಆರ್ ಎಸ್ ನಾಯಕರಿಗೆ ರೇವಂತ್ ಬಹಿರಂಗ ಸವಾಲು ಹಾಕಿದರು.