News Karnataka Kannada
Tuesday, May 07 2024
ತೆಲಂಗಾಣ

ತೆಲಂಗಾಣದ ವೈದ್ಯಕೀಯ ಸಂಸ್ಥೆಯ 43 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ

coivd 19
Photo Credit :

ಹೈದರಾಬಾದ್ : ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್‌ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ಸಂಸ್ಥೆಯ ಕನಿಷ್ಠ 43 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದು ವಾರದ ಹಿಂದೆ ನಡೆದಿದ್ದ ಕಾಲೇಜು ವಾರ್ಷಿಕ ದಿನಾಚರಣೆಯು ಸೋಂಕು ಹರಡಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ವಿಚಾರವಾಗಿ ಸುದ್ದಿವಾಹಿನಿ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿರುವ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ, ‘ವಾರ್ಷಿಕ ದಿನಾಚರಣೆ ಕುರಿತ ಮಾಹಿತಿಯನ್ನು ಸಂಸ್ಥೆಯ ನಮಗೆ ನೀಡಿರಲಿಲ್ಲ. ಸಮಾರಂಭದಲ್ಲಿ ಹಲವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದು ಸೋಂಕು ಹರಡಲು ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

‘ಇದುವರೆಗೆ 200 ಜನರನ್ನು ಪರೀಕ್ಷಿಸಲಾಗಿದೆ. ಕ್ಯಾಂಪಸ್‌ನಲ್ಲಿರುವ ಎಲ್ಲಾ ಜನರನ್ನು ಪರೀಕ್ಷಿಸಲು ಸೋಮವಾರ ವಿಶೇಷ ಶಿಬಿರವನ್ನು ಏರ್ಪಡಿಸಿದ್ದೇವೆ’ ಎಂದು ಡಾ.ಜುವೇರಿಯಾ ಹೇಳಿದ್ದಾರೆ.

24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು