ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರವಾದ ಜ್ವರ, ಹಾಗೂ ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಹೈದರಾಬಾದ್ನ ಯಶೋದಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ.
ಕೆಸಿಆರ್ ಹೃದಯದಲ್ಲಿ ಯಾವುದೇ ಬ್ಲಾಕ್ಗಳು ಕಂಡು ಬಂದಿಲ್ಲ. ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್ಐ ಸ್ಕ್ಯಾನ್ಗಳನ್ನೂ ಮಾಡಲಾಗುವುದು ಎಂದು ವೈದ್ಯ ಎಂ.ವಿ.ರಾವ್ ಮಾಹಿತಿ ನೀಡಿದ್ದಾರೆ.
ಪ್ರತಿವರ್ಷ ಫೆಬ್ರವರಿಯಲ್ಲಿ ಚಂದ್ರಶೇಖರ್ ರಾವ್ ಅವರಿಗೆ ನಾವು ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನೂ ಮಾಡುತ್ತೇವೆ. ಇದೀಗ ಸ್ವಲ್ಪ ಜ್ವರ, ಹೃದಯದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ಮಾಡಲಾಗುತ್ತಿದೆ. ವರದಿ ಬಂದ ಬಳಿಕ ಅದನ್ನು ಆಧರಿಸಿ ಚಿಕಿತ್ಸೆ ಶುರು ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ಚಂದ್ರಶೇಖರ್ ಅವರ ಮಗಳು ಶೋಭಾ ರಾವ್ ಮತ್ತು ಮಗಳು ಕೆ.ಕವಿತಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.