ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರವಾದ ಜ್ವರ, ಹಾಗೂ ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಹೈದರಾಬಾದ್ನ ಯಶೋದಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ.
ಕೆಸಿಆರ್ ಹೃದಯದಲ್ಲಿ ಯಾವುದೇ ಬ್ಲಾಕ್ಗಳು ಕಂಡು ಬಂದಿಲ್ಲ. ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್ಐ ಸ್ಕ್ಯಾನ್ಗಳನ್ನೂ ಮಾಡಲಾಗುವುದು ಎಂದು ವೈದ್ಯ ಎಂ.ವಿ.ರಾವ್ ಮಾಹಿತಿ ನೀಡಿದ್ದಾರೆ.
ಪ್ರತಿವರ್ಷ ಫೆಬ್ರವರಿಯಲ್ಲಿ ಚಂದ್ರಶೇಖರ್ ರಾವ್ ಅವರಿಗೆ ನಾವು ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನೂ ಮಾಡುತ್ತೇವೆ. ಇದೀಗ ಸ್ವಲ್ಪ ಜ್ವರ, ಹೃದಯದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ಮಾಡಲಾಗುತ್ತಿದೆ. ವರದಿ ಬಂದ ಬಳಿಕ ಅದನ್ನು ಆಧರಿಸಿ ಚಿಕಿತ್ಸೆ ಶುರು ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ಚಂದ್ರಶೇಖರ್ ಅವರ ಮಗಳು ಶೋಭಾ ರಾವ್ ಮತ್ತು ಮಗಳು ಕೆ.ಕವಿತಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…