ಹನುಮಕೊಂಡ(ತೆಲಂಗಾಣ): ಮಹಿಳೆಯರ ಮೇಲಿನ ಮತ್ತೊಂದು ದಾಳಿಯ ಘಟನೆಯಲ್ಲಿ ಹನುಮಕೊಂಡದಲ್ಲಿ ಯುವಕನೊಬ್ಬ 22 ವರ್ಷದ ಯುವತಿಯ ಮೇಲೆ ಹಲ್ಲೆ ನಡೆಸಿದ್ದು, ಆರೋಪಿ ಅಜರ್ ಮನೆಯಲ್ಲಿ ಒಂಟಿಯಾಗಿದ್ದ ಸಂತ್ರಸ್ತೆಯ ಕತ್ತು ಸೀಳಿದ್ದಾನೆ.
ತನ್ನನ್ನು ಮದುವೆಯಾಗುವಂತೆ ಆರೋಪಿ ಕೆಲ ಸಮಯದಿಂದ ಕಿರುಕುಳ ನೀಡುತ್ತಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಸಂತ್ರಸ್ತ ಯುವತಿ ಮದುವೆಯಾಗದ್ದಕ್ಕೆ ಕೋಪಗೊಂಡ ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.
ಸಂತ್ರಸ್ತೆ ಕಾಕತೀಯ ವಿಶ್ವವಿದ್ಯಾನಿಲಯದಲ್ಲಿ ಎಂಸಿಎ ಅಂತಿಮ ವರ್ಷ ಓದುತ್ತಿದ್ದು, ನಗರದ ಪೋಚಮ್ಮ ದೇವಳದ ಬಳಿ ವಾಸವಾಗಿದ್ದಾರೆ. ಅದೇ ಪ್ರದೇಶಕ್ಕೆ ಸೇರಿದ ಆರೋಪಿ ತನ್ನ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಕಿರುಕುಳ ನೀಡುತ್ತಿದ್ದನು. ಆದರೆ ಅವಳು ಪದೇ ಪದೇ ನಿರಾಕರಿಸಿದಳು.
ಆರೋಪಿ ಮತ್ತು ಸಂತ್ರಸ್ತೆ ಬೇರೆ ಬೇರೆ ಧರ್ಮಕ್ಕೆ ಸೇರಿದವರು. ಇಂದು ಆಕೆಯ ಪೋಷಕರು ಕೆಲಸಕ್ಕೆ ಹೋದ ನಂತರ, ಮನೆಯಲ್ಲಿ ಒಬ್ಬಳೇ ಇದ್ದಳು. ಇದರ ಲಾಭ ಪಡೆದ ಆರೋಪಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ.
ಯುವತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ವಾರಂಗಲ್ನ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದು, ಈಗ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಯ ವಿರುದ್ಧ ಸುಬೇದಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತೆಯನ್ನು ಪ್ರಸ್ತುತ ನಿಗಾದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ಲೀಲ ವಿಡಿಯೊ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮೊದಲ ಬಾರಿಗೆ…
ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…
ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…
ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್ ಇಟ್ಟುಕೊಂಡು…
ಬ್ರೆಜಿಲ್ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…
ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು…