News Karnataka Kannada
Thursday, May 02 2024
ತೆಲಂಗಾಣ

ಸಾಲದ ಸುಳಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

17-year-old girl found murdered in field
Photo Credit :

ಹೈದರಾಬಾದ್: ಸಾಲದ ಸುಳಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ನಾದರ್ ಗುಲ್ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಹೈದರಾಬಾದ್‌ನ ಸಂತೋಷ್ ನಗರದ ನಿವಾಸಿಗಳಾದ ಖುದ್ದೂಸ್ ಪಾಷಾ (37), ಫಾತಿಮಾ (28), ಮೆಹರ್ (9) ಮತ್ತು ಫಿರ್ದೋಶ್ ಬೇಗಂ (6) ಎಂದು ಗುರುತಿಸಲಾಗಿದೆ.

ಹಣಕಾಸು ವಿಚಾರವಾಗಿ ಸೋಮವಾರ ಖುದ್ದೂಸ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಇವರ ಜಗಳ ತಾರಕಕ್ಕೇರಿದ್ದು, ಖುದ್ದೂಸ್​ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬೈಕ್​ನಲ್ಲಿ ಕೂರ್ಮಲಗುಡ ಹೊಂಡಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಈ ಮೂವರನ್ನು ಕೆರೆಗೆ ತಳ್ಳಿ, ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಕೆಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವಾ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹಗಳನ್ನು ಹೊರ ತೆಗೆದಿದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು