ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ರೋಗಿಯ ಜೊತೆಗೆ ವೈದ್ಯರೋರ್ವರೂ ಕೂಡ ಹೃದಯಾಘಾತವಾಗಿ ಸಾವಿಗೀಡಾಗಿದ್ದಾರೆ.
ತೆಲಂಗಾಣದ ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ ಮಂಡಲದ ಗುಜ್ಜುತಾಂಡ ಎಂಬ ಪ್ರದೇಶಕ್ಕೆ ಸೇರಿದ ಸರ್ಜು ಎಂಬಾತನಿಗೆ ಹೃದಯಾಘಾತವಾಗಿತ್ತು. ಕುಟುಂಬಸ್ಥರು ತಕ್ಷಣ ಆತನನ್ನು ಗಾಂಧಾರಿ ಪ್ರದೇಶಲ್ಲಿರುವ ಖಾಸಗಿ ನರ್ಸಿಂಗ್ ಹೋಮ್ಗೆ ಕರೆ ತಂದಿದ್ದರು.
ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯ ಲಕ್ಷ್ಮಣ್ ಅವರಿಗೂ ಹೃದಯಾಘಾತವಾಗಿದ್ದೂ, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.