News Karnataka Kannada
Sunday, April 28 2024
ತೆಲಂಗಾಣ

ಹೆಂಡತಿ ಮೇಲೆ ಅನುಮಾನ: ಪತ್ನಿಯನ್ನು ಅಮಾನುಷವಾಗಿ ಕೊಂದ ಪತಿ

Murder Girl 16082021
Photo Credit :

ಹೈದರಾಬಾದ್ : ಹೆಂಡತಿ ಮೇಲೆ ಅನುಮಾನಪಟ್ಟ ಪತಿಯೊಬ್ಬ, ರಾತ್ರಿ ನಿಧಿಸುವ ಸಮಯದಲ್ಲಿ ಪತ್ನಿಯನ್ನು ಅಮಾನುಷವಾಗಿ ಕೊಂದು ದೇಹದಿಂದ ತಲೆಯನ್ನು ಬೇರ್ಪಡಿಸಿ ತುಂಡರಿಸಿದ ಘಟನೆ ಹೈದರಾಬಾದಿನ ರಾಜೇಂದ್ರ ನಗರದಲ್ಲಿ ನಡೆದಿದೆ. ನಂತರ ಆರೋಪಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಘಟನೆ ಹಿನ್ನೆಲೆ: 14 ವರ್ಷಗಳ ಹಿಂದೆ ಸಮ್ರಿನ್ ಬೇಗಂ ಎನ್ನುವ ಯುವತಿಯನ್ನು ಆರೋಪಿ ಫರ್ವೇಜ್ ವಿವಾಹವಾಗಿದ್ದ. ಆದರೆ, ಗಂಡನ ಹಿಂಸೆ ತಾಳಲಾಗದೆ ಸಮ್ರಿನ್ ಬೇಗಂ ಈ ಮೊದಲೇ ವಿಚ್ಚೇದನ ಪಡೆದು ಬೇರೆಯಾಗಿದ್ದರು. ಈ ನಡುವೆ ಕಳೆದ ವರ್ಷ ಇಬ್ಬರೂ ಬಾಳಬೇಕೆಂದು ನಿರ್ಧರಿಸಿ ಪುನ: ಮದುವೆ ಮಾಡಿಕೊಂಡಿದ್ದರು. ಅಂದಿನಿಂದಲೂ ಹೆಂಡತಿ ಮೇಲೆ ಅನುಮಾನ ಶುರುವಾಗಿತ್ತು.

ಇದೇ ವಿಚಾರವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಆದರೆ, ಇಂದು ಬೆಳಿಗ್ಗೆ 4 ಗಂಟೆಗೆ ಮನೆಗೆ ಹೋದ ಫರ್ವೇಜ್ ಹೆಂಡತಿ ನಿದ್ರೆಯಲ್ಲಿದ್ದ ವೇಳೆ ಕತ್ತಿಯಿಂದ ದಾಳಿ ಮಾಡಿದ್ದಾನೆ. ಇಷ್ಟಕ್ಕೆ ಆತನ ಕೋಪ ತೀರದೆ ಆಕೆಯ ದೇಹದಿಂದ ತಲೆಯನ್ನು ಬೇರ್ಪಡಿಸಿ, ಪಕ್ಕದಲ್ಲೇ ಇದ್ದ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಹೆಂಡತಿ ಮೇಲಿನ ಅನುಮಾನದಿಂದ ಈ ರೀತಿ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು