ಹೈದರಾಬಾದ್ : ಹೆಂಡತಿ ಮೇಲೆ ಅನುಮಾನಪಟ್ಟ ಪತಿಯೊಬ್ಬ, ರಾತ್ರಿ ನಿಧಿಸುವ ಸಮಯದಲ್ಲಿ ಪತ್ನಿಯನ್ನು ಅಮಾನುಷವಾಗಿ ಕೊಂದು ದೇಹದಿಂದ ತಲೆಯನ್ನು ಬೇರ್ಪಡಿಸಿ ತುಂಡರಿಸಿದ ಘಟನೆ ಹೈದರಾಬಾದಿನ ರಾಜೇಂದ್ರ ನಗರದಲ್ಲಿ ನಡೆದಿದೆ. ನಂತರ ಆರೋಪಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಘಟನೆ ಹಿನ್ನೆಲೆ: 14 ವರ್ಷಗಳ ಹಿಂದೆ ಸಮ್ರಿನ್ ಬೇಗಂ ಎನ್ನುವ ಯುವತಿಯನ್ನು ಆರೋಪಿ ಫರ್ವೇಜ್ ವಿವಾಹವಾಗಿದ್ದ. ಆದರೆ, ಗಂಡನ ಹಿಂಸೆ ತಾಳಲಾಗದೆ ಸಮ್ರಿನ್ ಬೇಗಂ ಈ ಮೊದಲೇ ವಿಚ್ಚೇದನ ಪಡೆದು ಬೇರೆಯಾಗಿದ್ದರು. ಈ ನಡುವೆ ಕಳೆದ ವರ್ಷ ಇಬ್ಬರೂ ಬಾಳಬೇಕೆಂದು ನಿರ್ಧರಿಸಿ ಪುನ: ಮದುವೆ ಮಾಡಿಕೊಂಡಿದ್ದರು. ಅಂದಿನಿಂದಲೂ ಹೆಂಡತಿ ಮೇಲೆ ಅನುಮಾನ ಶುರುವಾಗಿತ್ತು.
ಇದೇ ವಿಚಾರವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಆದರೆ, ಇಂದು ಬೆಳಿಗ್ಗೆ 4 ಗಂಟೆಗೆ ಮನೆಗೆ ಹೋದ ಫರ್ವೇಜ್ ಹೆಂಡತಿ ನಿದ್ರೆಯಲ್ಲಿದ್ದ ವೇಳೆ ಕತ್ತಿಯಿಂದ ದಾಳಿ ಮಾಡಿದ್ದಾನೆ. ಇಷ್ಟಕ್ಕೆ ಆತನ ಕೋಪ ತೀರದೆ ಆಕೆಯ ದೇಹದಿಂದ ತಲೆಯನ್ನು ಬೇರ್ಪಡಿಸಿ, ಪಕ್ಕದಲ್ಲೇ ಇದ್ದ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಹೆಂಡತಿ ಮೇಲಿನ ಅನುಮಾನದಿಂದ ಈ ರೀತಿ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ