News Karnataka Kannada
Saturday, May 04 2024
ತೆಲಂಗಾಣ

ಹೈದರಾಬಾದ್ ನಲ್ಲಿ ತಲೆಎತ್ತಲಿದೆ 216 ಅಡಿ ಎತ್ತರದ ರಾಮಾನುಜರ ಪ್ರತಿಮೆ: ಫೆ. 5 ರಂದು ಪ್ರಧಾನಿ ಮೋದಿಯಿಂದ ಅನಾವರಣ

Ramanuja Acharya
Photo Credit :

ಹೈದರಾಬಾದ್ ನ ಮುಂಚಿಂತಲ್‌ ಪ್ರದೇಶದಲ್ಲಿರುವ ಚಿನ್ನ ಜೀಯರ್ ಆಶ್ರಮ , ಫೆಬ್ರವರಿ 2 ರಿಂದ 14 ರವರೆಗೆ ರಾಮಾನುಜಾಚಾರ್ಯರ 1,000ನೇ ವಾರ್ಷಿಕೋತ್ಸವ ಬಹಳ ಸಂಭ್ರಮದಿಂದ ನಡೆಸಲು ಸಜ್ಜಾಗುತ್ತಿದ್ದು.

ಈ ವೇಳೆ ಇಲ್ಲಿ 216 ಅಡಿ ಎತ್ತರದಲ್ಲಿ ನಿರ್ಮಿಸಲಾದ ರಾಮಾನುಜರ ಪ್ರತಿಮೆ ಅಥವಾ ‘ಸಮಾನತೆಯ ಪ್ರತಿಮೆ’ಯನ್ನು ಅನಾವರಣಗೊಳಲ್ಲಿದೆ.

ವಿಶೇಷ ಅಂದರೆ ಖುದ್ದು ಪ್ರಧಾನಿ ಮೋದಿ ಅವರೇ ಫೆಬ್ರವರಿ 5 ರಂದು ಈ ಪ್ರತಿಮೆ’ಯನ್ನು ಅನಾವರಣಗೊಳಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ದೃಢಪಡಿಸಿದ್ದು, ಪ್ರಧಾನಿಯವರ ವೇಳಾಪಟ್ಟಿಯಲ್ಲಿ ಫೆಬ್ರವರಿ 5 ರಂದು ಮಧ್ಯಾಹ್ನ 3.30ಕ್ಕೆ ಮೋದಿ ಆಶ್ರಮವನ್ನು ತಲುಪಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದೆ.

ಬಳಿಕ ಅಲ್ಲಿ ನಡೆಯಿತು ಹೋಮಗಳಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದು, ಇವರಿಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಸಾಥ್ ನೀಡಲಿದ್ದಾರೆ.

ರಾಮಾನುಜರ ಪ್ರತಿಮೆಯು ಸುಮಾರು ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಈ ಪ್ರದೇಶದಲ್ಲಿ 108 ಮಾದರಿ ದೇವಾಲಯಗಳು ಮತ್ತು 144 ಯಾಗ ಶಾಲೆಗಳಿವೆ. ಇನ್ನು ಪ್ರತಿ ಯಾಗ ಶಾಲೆಯಲ್ಲಿ ಒಂಬತ್ತು ಹೋಮ ಕುಂಡಗಳಿರುತ್ತವೆ.

ಫೆ.5 ರಂದು ನಡೆಯುವ ಈ ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಯಿಂದ ಸುಮಾರು 5,000 ಪುರೋಹಿತರು ಮತ್ತು ವೇದ ಪಂಡಿತರು ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಮಾನುಜರು 11ನೇ ಶತಮಾನದ ಸಮಾಜ ಸುಧಾರಕ, ಸಂತ, ವಿದ್ವಾಂಸ ಹಾಗೂ ದಾರ್ಶನಿಕ ಮತ್ತು ಶ್ರೀ ವಿಶಿಷ್ಟಾದ್ವೈತ ಸಿದ್ಧಾಂತದ ಪ್ರತಿಪಾದಕರು ಆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು