ತೆಲಂಗಾಣ: ಹೈದರಾಬಾದ್ನ ನಗರ ಯೋಜನಾ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) 40 ಲಕ್ಷ ರೂ. ನಗದು ಹಾಗೂ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಅಧಿಕಾರಿಯನ್ನು ಶಿವ ಬಾಲಕೃಷ್ಣ ಎಂದು ಗುರುತಿಸಲಾಗಿದೆ.
ಶಿವ ಬಾಲಕೃಷ್ಣ ಅವರು ತೆಲಂಗಾಣ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (TSRERA) ಕಾರ್ಯದರ್ಶಿ ಮತ್ತು ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (HMDA) ಮಾಜಿ ನಿರ್ದೇಶಕರಾಗಿದ್ದಾರೆ.
ಅಧಿಕಾರಿಗೆ ಸಂಬಂಧಿಸಿದ ಸ್ಥಳಗಳಲ್ಲಿ 14 ತಂಡಗಳು ಶೋಧ ನಡೆಸಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ. ಶೋಧ ಕಾರ್ಯ ಗುರುವಾರವೂ ಮುಂದುವರೆದಿದೆ.
2 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದೆ. ಮನೆಯಲ್ಲಿ 40 ಐಫೋನ್ಗಳು ಮತ್ತು ಲ್ಯಾಪ್ಟಾಪ್ಗಳಿವೆ. ಬ್ಯಾಂಕ್ ಠೇವಣಿ, ವಿಲ್ಲಾಗಳ ದಾಖಲೆಗಳು ಮತ್ತು ನಿವೇಶನಗಳನ್ನು ಜಪ್ತಿ ಮಾಡಲಾಗಿದೆ. ಬಾಲಕೃಷ್ಣ ಅವರಿಗೆ ಸಂಬಂಧಿಸಿದ 20 ಸ್ಥಳಗಳಲ್ಲಿ ಬುಧವಾರ ಬೆಳಗ್ಗೆ 5 ಗಂಟೆಯಿಂದ ಎಸಿಬಿ ದಾಳಿ ನಡೆಸಿತ್ತು.
ಶಿವಬಾಲಕೃಷ್ಣ ಅವರನ್ನು ಬಂಧಿಸಲಾಗಿದ್ದು, ಎಸಿಬಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಬಹುದು.