ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಮಾಧವಿ ಲತಾ ವಿರುದ್ಧ ಐಪಿಸಿ ಸೆಕ್ಷನ್ 295-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಬಗ್ಗೆ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದ ಮಾಧವಿ, ‘ಅದು ಅಪೂರ್ಣ ವಿಡಿಯೊ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆ ವಿಡಿಯೊ ಕಾರಣದಿಂದ ಯಾರ ಭಾವನೆಗಾದರೂ ನೋವು ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಎಲ್ಲರ ಭಾವನೆಗಳನ್ನು ಗೌರವಿಸುವವಳು ನಾನು’ ಎಂದು ಹೇಳಿದ್ದರು.
ಬಿಜೆಪಿ ಮತ್ತು ಆರ್ಎಸ್ಎಸ್ನವರು ಜನರ ಮಧ್ಯೆ ಒಡಕು ಮೂಡಿಸಿ ಬ್ರಾಂಡ್ ಹೈದರಾಬಾದ್ ಪರಿಕಲ್ಪನೆಗೆ ಧಕ್ಕೆ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಗುಡುಗಿದ್ದರು.
कल श्री राम नवमी के पावन पर्व के उपलक्ष में “भाग्यनगर श्री राम नवमी उत्सव समिति” के द्वारा गोशामहल विधानसभा में आयोजित शोभा यात्रा कार्यक्रम में हिस्सा लिया जिसमे मेरे सभी छोटे और बड़े बहन भाइयों का जोश देखने लायक़ था।
प्रभु श्री राम हम सभी के जीवन को सुख समृद्ध बनायेंगे 🙏 pic.twitter.com/DGvhCwGPUh
— Kompella Madhavi Latha (Modi Ka Parivar) (@Kompella_MLatha) April 18, 2024