News Karnataka Kannada
Sunday, May 05 2024
ತೆಲಂಗಾಣ

ʼಅಗ್ನಿಪಥ್‌ʼ ಪ್ರತಿಭಟನೆ ವೇಳೆ ಮೃತಪಟ್ಟ ಕುಟುಂಬಕ್ಕೆ 25ಲಕ್ಷ ಘೋಷಿಸಿದ ತೆಲಂಗಾಣ ಸರ್ಕಾರ

Cm Chandrashekar
Photo Credit : Twitter

 ತೆಲಂಗಾಣ: ʼಅಗ್ನಿಪಥ್‌ʼ ಸೇನಾ ನೇಮಕಾತಿ ವಿರುದ್ಧ ಪ್ರತಿಭಟಿಸಿಸುತ್ತಿದ್ದ ವೇಳೆ ಮೃತಪಟ್ಟ ಯುವಕನ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಟ್ವಿಟ್‌ ಮಾಡಿರುವ‌ ಸಿಎಂ ಕೆಸಿಆರ್, “ಕೇಂದ್ರದ ತಪ್ಪು ನೀತಿಗೆ ಬಲಿಯಾದ ರಾಕೇಶ್ ಅವರ ಕುಟುಂಬಕ್ಕೆ ಸಂತಾಪಗಳು. ರಾಕೇಶ್ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಕುಟುಂಬದಲ್ಲಿ ಅರ್ಹರಿಗೆ ಅವರ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ವಾರಂಗಲ್ ಮೂಲದ ರಾಕೇಶ್ ಅವರ ಸಾವಿನ ಬಗ್ಗೆ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್, ಪ್ರತಿಭಟನೆಯ ವೇಳೆ ಪ್ರಾಣ ಕಳೆದುಕೊಂಡ ಯುವಕನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

”ಕೇಂದ್ರ ಸರಕಾರ ಅನುಸರಿಸುತ್ತಿರುವ ತಪ್ಪು ನೀತಿಗಳಿಂದ ರಾಕೇಶ್ ಬಲಿಂದನವರ ಹತ್ಯೆಯಾಗಿದೆ ಎಂದು ಮುಖ್ಯಮಂತ್ರಿ ವಿಷಾದ ವ್ಯಕ್ತಪಡಿಸಿದರು. ತೆಲಂಗಾಣದ ಮಕ್ಕಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡಲಿದೆ ಎಂದು ಹೇಳಿದ್ದಾರೆ.

ಅಗ್ನಿಪಥ್‌ ಯೋಜನೆ ವಿರೋಧಿಸಿ ಸಿಕಂದರಾಬಾದ್ ನಿಲ್ದಾಣದಲ್ಲಿ “ಸುಮಾರು 1500 ರಿಂದ 3000 ಜನರು ಪ್ರತಿಭಟನೆ ನಡೆಸಿದರು. ಅವರು ಕಲ್ಲು ತೂರಾಟ ನಡೆಸಿದರು ಮತ್ತು ಕೆಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸಿಕಂದರಾಬಾದ್ ರೈಲ್ವೇ ಎಸ್ಪಿ ಅನುರಾಧಾ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು