ತೆಲಂಗಾಣ: ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಆಂಧ್ರ ಪ್ರದೇಶದಿಂದ ವಿಭಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ತೆಲಂಗಾಣದಲ್ಲಿ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆ ಏರಲು ಭಾರೀ ಸಿದ್ಧತೆ ನಡೆಸಿದೆ.
ಕಾಂಗ್ರೆಸ್ ವಿರುದ್ಧ ಸೋತು ಆಡಳಿತ ಪಕ್ಷವಾಗಿದ್ದ ಬಿಆರ್ಎಸ್ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಸದ್ಯ ವಿಧಾನಸಭೆ ಚುನಾವಣೆಯ ಸ್ಪಷ್ಟ ಬಹುಮತ ಗೊತ್ತಾಗುತ್ತಿದ್ದಂತೆ ಸಿಎಂ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ.
ಕೆ.ಚಂದ್ರಶೇಖರ್ ರಾವ್ ಅವರು, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಆಪ್ತ ಸಿಬ್ಬಂದಿ ಮೂಲಕ ರಾಜೀನಾಮೆ ಪತ್ರವನ್ನು ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರಿಗೆ ಕಳುಹಿಸಿದ್ದಾರೆ. ರಾಜೀನಾಮೆ ಪತ್ರವನ್ನು ಕಳುಹಿಸಿದ ಕೆ.ಚಂದ್ರಶೇಖರ್ ರಾವ್ ಅವರು ಬಳಿಕ ತಮ್ಮ ಪಾರ್ಮ್ ಹೌಸ್ಗೆ ತೆರಳಿದ್ದಾರೆ ಎನ್ನಲಾಗಿದೆ.