News Karnataka Kannada
Saturday, May 04 2024
ತೆಲಂಗಾಣ

ಪುತ್ರನ ‘ಸನಾತನ ಧರ್ಮ’ ವಿವಾದಿತ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಎಂ ಕೆ ಸ್ಟಾಲಿನ್

CM Stalin and son udaya
Photo Credit : News Kannada

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಹಾಗೂ ಡಿಎಂಕೆ ಸಚಿವ ಉದಯ ನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು ಆಯೋಜಿಸಿದ್ದ ‘ಸನಾತನ ನಿರ್ಮೂಲನಾ ಸಮ್ಮೇಳನ’ದಲ್ಲಿ ಉದಯನಿಧಿ ಸ್ಟಾಲಿನ್‌ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು,  ‘ನೀವು ಈ ಕಾರ್ಯಕ್ರಮವನ್ನು ಸನಾತನ ವಿರೋಧಿ ಸಮ್ಮೇಳನ ಎನ್ನುವ ಬದಲು ಸನಾತನ ನಿರ್ಮೂಲನಾ ಸಮ್ಮೇಳನ ಎಂದು ಆಯೋಜಿಸಿದ್ದೀರಿ. ಇದಕ್ಕೆ ನನಗೆ ಬಹಳ ಇಷ್ಟವಾಯಿತು. ಕೆಲವು ವಿಚಾರಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು.

ಈ ಹೇಳಿಕೆ ದೇಶದಲ್ಲಿ ವಿರೋದಕ್ಕೆ ಕಾರಣವಾಗಿದೆ. ಆದರೆ ಈಗ ಇದೇ ಹೇಳಿಕೆಯನ್ನು ಇದೀಗ ಅವರ ತಂದೆ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಆಗಿರುವ ಎಂ.ಕೆ ಸ್ಟಾಲಿನವರು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ‘ಕೆಲವರು ಆಧ್ಯಾತ್ಮಿಕ ವೇದಿಕೆಗಳಲ್ಲಿ ಸ್ತ್ರೀಯರನ್ನು ಅವಹೇಳನ ಮಾಡುತ್ತಾರೆ ಮಹಿಳೆಯರು ಹೊರಗೆ ಹೋಗಿ ಕೆಲಸ ಮಾಡಬಾರದು’ ಎನ್ನುತ್ತಾರೆ.

ವಿಧವೆಯರು ಮರುಮದುವೆ ಆಗಬಾರದು ಎನ್ನುತ್ತಾರೆ. ಮರು ವಿವಾಹಕ್ಕೆ ಯಾವುದೇ ಆಚರಣೆ ಅಥವಾ ಪರಣವಿಲ್ಲ ಎನ್ನುತ್ತಾರೆ. ಮಹಿಳೆ ಮೇಲಿನ ದೌರ್ಜನ್ಯ ಶಾಶ್ವತವಾಗಿರಲು ಸನಾತನ ಪದ ಬಳಸುತ್ತಾರೆ. ಇಂತಹ ಸಿದ್ಧಾಂತಗಳ ವಿರುದ್ಧ ಪುತ್ರ ಉದಯ ನಿಧಿ ಧ್ವನಿಯೆತ್ತಿದ್ದಾರೆ ಎಂದು ಹೇಳಿದರು.

ಇಂತಹ ಮಹಿಳಾ ವಿರೋಧಿ ಅಸಮಾನತೆ ಅಳಿಸಬೇಕು ಎಂದು ಅವರು ಹೇಳಿದ್ದಾರೆ. ಇದನ್ನು ತಪ್ಪಾಗಿ ಉಲ್ಲೇಖಿಸಿ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಹೀಗೆ ಆರೋಪಿಸಿ ಡಿಎಂಕೆ ಮುಳುಗಿಸಬಹುದು ಎಂದುಕೊಂಡರೆ ಅದು ಅಸಾಧ್ಯ ಎಂದು ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾರ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು