ಮಹಬೂಬಾಬಾದ್: ತೆಲಂಗಾಣದಲ್ಲಿ ನವೆಂಬರ್ 30 ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಈ ನಿಟ್ಟಿನಲ್ಲಿ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರವಾಗಿ ಪ್ರಚಾರ ಭಾಷಣ ಮಾಡಿದ್ದಾರೆ.
ಬಿಜೆಪಿಯೊಂದಿಗೆ ದೋಸ್ತಿ ಮಾಡಿಕೊಳ್ಳಲು ಕೆಸಿಆರ್ ದೆಹಲಿಗೆ ಬಂದಿದ್ದರು. ಆದರೆ ತೆಲಂಗಾಣ ಜನತೆಯ ಆಶಯಕ್ಕೆ ವಿರುದ್ಧವಾಗಿ ಬಿಜೆಪಿ ಎಂದಿಗೂ ಕೆಲಸ ಮಾಡಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಬೂಬಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ನಂತರ, ಕೆಸಿಆರ್ ನನ್ನನ್ನು ಭೇಟಿ ಮಾಡಲು ದೆಹಲಿಗೆ ಬಂದರು ಮತ್ತು ಎನ್ ಡಿಎ ಸೇರಲು ಬಯಸುವುದಾಗಿ ಹೇಳಿದರು. ಅವರಿಗೆ ಬೆಂಬಲ ನೀಡುವಂತೆಯೂ ಕೇಳಿಕೊಂಡರು. ಅವರ ಕಾರ್ಯಗಳಿಂದಾಗಿ ಮೋದಿ ಅವರೊಂದಿಗೆ ಸಂಬಂಧ ಹೊಂದಲು ಸಾಧ್ಯವಿಲ್ಲ ಎಂದು ನಾನು ಅವರಿಗೆ (ಕೆಸಿಆರ್) ಹೇಳಿದ್ದೇನೆ ಎಂದು ಮೋದಿ ಹೇಳಿದರು.
ತೆಲಂಗಾಣವನ್ನು ನಾಶ ಮಾಡುವಲ್ಲಿ ಕಾಂಗ್ರೆಸ್ ಮತ್ತು ಕೆಸಿಆರ್ ಇಬ್ಬರೂ ಸಮಾನ ಪಾಪಿಗಳು. ಹಾಗಾಗಿ, ತೆಲಂಗಾಣ ಜನರು ಒಬ್ಬರನ್ನು ಹೊರಹಾಕಿದ ನಂತರ ಮತ್ತೊಂದು ರೋಗವನ್ನು ಬಿಡಲು ಸಾಧ್ಯವಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
KCR abuses me because I did not allow him to join NDA.
BJP will never allow BRS to come close to it. pic.twitter.com/TDMEfjogz5
— Narendra Modi (@narendramodi) November 27, 2023