ಮಹಬೂಬಾಬಾದ್: ತೆಲಂಗಾಣದಲ್ಲಿ ನವೆಂಬರ್ 30 ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಈ ನಿಟ್ಟಿನಲ್ಲಿ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರವಾಗಿ ಪ್ರಚಾರ ಭಾಷಣ ಮಾಡಿದ್ದಾರೆ.
ಬಿಜೆಪಿಯೊಂದಿಗೆ ದೋಸ್ತಿ ಮಾಡಿಕೊಳ್ಳಲು ಕೆಸಿಆರ್ ದೆಹಲಿಗೆ ಬಂದಿದ್ದರು. ಆದರೆ ತೆಲಂಗಾಣ ಜನತೆಯ ಆಶಯಕ್ಕೆ ವಿರುದ್ಧವಾಗಿ ಬಿಜೆಪಿ ಎಂದಿಗೂ ಕೆಲಸ ಮಾಡಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಬೂಬಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ನಂತರ, ಕೆಸಿಆರ್ ನನ್ನನ್ನು ಭೇಟಿ ಮಾಡಲು ದೆಹಲಿಗೆ ಬಂದರು ಮತ್ತು ಎನ್ ಡಿಎ ಸೇರಲು ಬಯಸುವುದಾಗಿ ಹೇಳಿದರು. ಅವರಿಗೆ ಬೆಂಬಲ ನೀಡುವಂತೆಯೂ ಕೇಳಿಕೊಂಡರು. ಅವರ ಕಾರ್ಯಗಳಿಂದಾಗಿ ಮೋದಿ ಅವರೊಂದಿಗೆ ಸಂಬಂಧ ಹೊಂದಲು ಸಾಧ್ಯವಿಲ್ಲ ಎಂದು ನಾನು ಅವರಿಗೆ (ಕೆಸಿಆರ್) ಹೇಳಿದ್ದೇನೆ ಎಂದು ಮೋದಿ ಹೇಳಿದರು.
ತೆಲಂಗಾಣವನ್ನು ನಾಶ ಮಾಡುವಲ್ಲಿ ಕಾಂಗ್ರೆಸ್ ಮತ್ತು ಕೆಸಿಆರ್ ಇಬ್ಬರೂ ಸಮಾನ ಪಾಪಿಗಳು. ಹಾಗಾಗಿ, ತೆಲಂಗಾಣ ಜನರು ಒಬ್ಬರನ್ನು ಹೊರಹಾಕಿದ ನಂತರ ಮತ್ತೊಂದು ರೋಗವನ್ನು ಬಿಡಲು ಸಾಧ್ಯವಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…