ಹೈದರಾಬಾದ್: ಟಾಲಿವುಡ್ ನಲ್ಲಿ ಇತ್ತೀಚೆಗಷ್ಟೆ ಹೊಸದೊಂದು ಡ್ರಗ್ಸ್ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿಂದೆ ಹಲವು ಬಾರಿ ಟಾಲಿವುಡ್ನಲ್ಲಿ ಡ್ರಗ್ಸ್ ಪ್ರಕರಣ ಹೊರಬಂದಿದ್ದು ಹಲವು ನಟ-ನಟಿಯರು ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ.
ಇತ್ತೀಚೆಗಷ್ಟೆ ಹೊಸದೊಂದು ಪ್ರಕರಣದಲ್ಲಿ ಟಾಲಿವುಡ್ನ ಜನಪ್ರಿಯ ನಿರ್ದೇಶಕರೊಬ್ಬರ ಹೆಸರು ಪ್ರಕರಣದಲ್ಲಿ ಕೇಳಿ ಬಂದಿದ್ದು, ಪೊಲೀಸರು ಇದೀಗ ನಿರ್ದೇಶಕರ ರಕ್ತ ಮತ್ತು ಮೂತ್ರದ ಮಾದರಿಗಳನ್ನು ಪಡೆದು, ಪರೀಕ್ಷೆಗೆಂದು ಕಳಿಸಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಹೈದರಾಬಾದ್ನ ಗಚ್ಚಿಬೌಲಿಯ ರ್ಯಾಡಿಸನ್ ಬ್ಲೂ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸ್, ಮಾದಕ ವಸ್ತು ವಿರೋಧಿ ಪಡೆಯು ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಡ್ರಗ್ ಪೆಡ್ಲರ್ ಒಬ್ಬನ ಬಂಧಿಸಲಾಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ಮಾಪಕ, ಓರ್ವ ನಟಿ ಹಾಗೂ ಬಿಜೆಪಿ ಮುಖಂಡನ ಪುತ್ರನನ್ನು ಸಹ ವಶಕ್ಕೆ ಪಡೆಯಲಾಗಿತ್ತು. ಇವರ ಜೊತೆಗೆ ಟಾಲಿವುಡ್ನ ಜನಪ್ರಿಯ ನಿರ್ದೇಶಕ ಕ್ರಿಶ್ ಸಹ ಇದ್ದರೆಂದು, ಪೊಲೀಸರು ದಾಳಿ ನಡೆಸುವ ಕೇವಲ ಅರ್ಧ ಗಂಟೆ ಮುಂಚಿತವಾಗಿ ಅವರು ಅಲ್ಲಿಂದ ತೆರಳಿದ್ದರು ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ಗೊತ್ತಾಗಿತ್ತು.
ಬಳಿಕ ಪೊಲೀಸರು ನಿರ್ದೇಶಕ ಕ್ರಿಶ್ಗೆ ನೊಟೀಸ್ ನೀಡಿ ವಿಚಾರಣೆಗೆ ಕರೆದಿದ್ದರು. ಅಂತೆಯೇ ನಿನ್ನೆ ಮಾರ್ಚ್ 2ರಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದ ಕ್ರಿಶ್ ರ ರಕ್ತ ಮತ್ತು ಮೂತ್ರದ ಮಾದರಿಗಳನ್ನು ಪೊಲೀಸರು ಸಂಗ್ರಹಿಸಿ ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಒಂದೊಮ್ಮೆ ರಕ್ತ ಮತ್ತು ಮೂತ್ರ ಪರೀಕ್ಷೆಯಲ್ಲಿ ಕ್ರಿಶ್ ಮಾದಕ ವಸ್ತು ಸೇವಿಸಿದ್ದು ಖಾತ್ರಿಯಾದರೆ ಅವರನ್ನು ಬಂಧಿಸಲಾಗುತ್ತದೆ.
ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…