ತೆಲಂಗಾಣ: ಭೂಕಬಳಿಕೆ ಪ್ರಕರಣದಲ್ಲಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸೋದರಳಿಯ ಕನ್ನ ರಾವ್ ಅವರನ್ನು ಬಂಧಿಸಲಾಗಿದೆ.
ಹೈದರಾಬಾದ್ನ ಹೊರವಲಯದಲ್ಲಿರುವ ಎರಡು ಎಕರೆ ಜಾಗವನ್ನು ಕನ್ನರಾವ್ ಕಬಳಿಸಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು ಈ ಹಿನ್ನಲೆಯಲ್ಲಿ, ಉದ್ಯಮಿ ಕನ್ನರಾವ್ ಸೇರಿದಂತೆ ಎಂಟು ಮಂದಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಓಎಸ್ಆರ್ ಪ್ರಾಜೆಕ್ಟ್ಸ್ ಎಂಬ ಖಾಸಗಿ ಕಂಪನಿ ಹಾಗೂ ಆರೋಪಿಗಳ ನಡುವೆ ಈ ವಿವಾದಿತ ಭೂಮಿಯ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇದೆ.
ಮಾರ್ಚ್ 3ರಂದು ಕನ್ನ ಹಾಗೂ ಇತರರ ವಿರುದ್ಧ ಅಕ್ರಮ ಪ್ರವೇಶ, ಅಪರಾಧ ಪಿತೂರಿ, ಕೊಲೆ ಯತ್ನ ಹಾಗೂ ದೊಂಬಿ ಪ್ರಕರಣ ದಾಖಲಾಗಿತ್ತು.
ಆರಂಭದಲ್ಲಿ ಕನ್ನ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ಹೈಕೋರ್ಟ್ ತಿರಸ್ಕರಿಸಿತ್ತು. ದೂರುದಾರ ಬಂದೋಜು ಶ್ರೀನಿವಾಸ್ ಸಿಎಂ ರೇವಂತ್ ರೆಡ್ಡಿ ಸಂಬಂಧಿ ಎಂದು ಹೇಳಲಾಗುತ್ತಿದೆ.