ಹೈದರಾಬಾದ್: ಸುವರ್ಣ ತೆಲಂಗಾಣ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಮುಂಬರುವ ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದು ಜನತೆಯಲ್ಲಿ ಮನವಿ ಮಾಡಿದೆ.
ಕರ್ನಾಟಕದಲ್ಲಿ ಚುನಾವಣೆ ಪೂರ್ವಭಾವಿಯಾಗಿ ಕಾಂಗ್ರೆಸ್ 100 ದಿನಗಳಲ್ಲಿ ಪಂಚಭರವಸೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಅದೇ ರೀತಿ ನಡೆದುಕೊಂಡಿದೆ. ಅದೇ ರೀತಿ ತೆಲಂಗಾಣದಲ್ಲಿ ಆರು ಭರವಸೆಗಳನ್ನು ಜನರಿಗೆ ನೀಡಿದೆ. ಈ ಭರವಸೆ ಈಡೇರಿಸಿ ಇತಿಹಾಸ ನಿರ್ಮಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ ಎಂದು ಸಿಡಬ್ಲ್ಯುಸಿ ಹೇಳಿದೆ.
ತೆಲಂಗಾಣ ಸರ್ಕಾರಕ್ಕೆ ದೆಹಲಿ ಮತ್ತು ಹೈದರಾಬಾದ್ ಸರ್ಕಾರಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ ಎಂದು ಸಭೆಯಲ್ಲಿದ್ದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಎರಡು ದಿನಗಳ ಸಭೆಯ ಕೊನೆಗೆ ಸಾರ್ವಜನಿಕ ರ್ಯಾಲಿ ನಡೆಯಲಿದ್ದು, ರ್ಯಾಲಿಗೂ ಕೆಲ ಗಂಟೆಗಳ (ಸಿಡಬ್ಲ್ಯುಸಿ) ಮೊದಲು ನಾಯಕರು ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.