ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಹೈದರಾಬಾದ್-ನಾಗ್ಪುರ ಹೆದ್ದಾರಿಯ ಮುಪ್ಕಲ್ ಬೈಪಾಸ್ ನ ಕೊತಪಲ್ಲಿ ಬಳಿ ಟಯರ್ ಸ್ಫೋಟಗೊಂಡ ನಂತರ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಗಾಯಾಳುಗಳನ್ನು ಅರ್ಮೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ.
ಮೃತರು ಮತ್ತು ಗಾಯಗೊಂಡವರು ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗಿದೆ. ಅವರು ಹೈದರಾಬಾದ್ ನಿಂದ ನಿರ್ಮಲ್ ಗೆ ತೆರಳುತ್ತಿದ್ದರು.
ಪೊಲೀಸರ ಪ್ರಕಾರ, ಟೈರ್-ಸಿಡಿದ ನಂತರ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.