ಹೈದರಾಬಾದ್: ಹೈದರಾಬಾದ್ ನ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಗುರುವಾರ ನಡೆದ ಅಡುಗೆ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೆಡ್ಚಲ್ ಮಲ್ಕಾಜ್ಗಿರಿ ಜಿಲ್ಲೆಯ ಸೆರಿಲಿಂಗಂಪಲ್ಲಿಯ ರೈಲ್ ವಿಹಾರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದಿದೆ.
ಮನೆಯಲ್ಲಿದ್ದ ವ್ಯಕ್ತಿಗಳು ರಾಜಸ್ಥಾನದ ವಲಸಿಗರಾಗಿದ್ದು, ಅವರು ಕುಲ್ಫಿ ಐಸ್ ಕ್ರೀಮ್ ತಯಾರಿಸಿ ಮಾರಾಟ ಮಾಡುವ ಮೂಲಕ ಜೀವನೋಪಾಯವನ್ನು ಸಂಪಾದಿಸುತ್ತಿದ್ದರು.
ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.