ಹೈದರಾಬಾದ್: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಸಂಯೋಜಿತ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಬೆಂಬಲಿಸಲು ತೆಲಂಗಾಣ ರಾಷ್ಟ್ರ ಸಮಿತಿ (ಟಿ ಆರ್ ಎಸ್) ಶುಕ್ರವಾರ ನಿರ್ಧರಿಸಿದೆ.
ಟಿ ಆರ್ ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಆಳ್ವಾ ಅವರನ್ನು ಬೆಂಬಲಿಸುವ ನಿರ್ಧಾರವನ್ನು ತೆಗೆದುಕೊಂಡರು. ಪಕ್ಷದ ಎಲ್ಲಾ 16 ಸಂಸದರು ವಿರೋಧ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಲಿದ್ದಾರೆ ಎಂದು ಟಿ ಆರ್ ಎಸ್ ಸಂಸದೀಯ ಪಕ್ಷದ ನಾಯಕ ಕೆ.ಕೇಶವ ರಾವ್ ಹೇಳಿದ್ದಾರೆ.
ಆಗಸ್ಟ್ ೬ ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ ಮಾಜಿ ರಾಜ್ಯಪಾಲರಾಗಿರುವ ಆಳ್ವಾ ಅವರು ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿ ಜಗದೀಪ್ ಧಂಕರ್ ವಿರುದ್ಧ ನೇರ ಹಣಾಹಣಿಯಲ್ಲಿದ್ದಾರೆ. ಕಳೆದ ತಿಂಗಳು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಸಂಯೋಜಿತ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಟಿ ಆರ್ ಎಸ್ ಬೆಂಬಲಿಸಿದೆ.