ಹೈದರಾಬಾದ್: ಹೈದರಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಅವರ ಸಂಬಂಧಿಕರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಮೃತರ ಸಂಬಂಧಿಕರು ಮಲಕ್ ಪೇಟೆಯ ಸರ್ಕಾರಿ ಆಸ್ಪತ್ರೆ ಮುಂದೆ ಧರಣಿ ಕುಳಿತರು. ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸರ್ಕಾರಿ ಸ್ವಾಮ್ಯದ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಬ್ಬರೂ ಮಹಿಳೆಯರು ಸಾವನ್ನಪ್ಪಿದ್ದಾರೆ.
ನಾಗರ್ ಕರ್ನೂಲ್ ಜಿಲ್ಲೆಯ ಗ್ರಾಮವೊಂದರ ಚಾಲಕ ಮಹೇಶ್ ತನ್ನ ಪತ್ನಿ ಶ್ರೀ ವೆನೆಲ್ಲಾ (23) ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಿದ್ದರು.