ತೆಲಂಗಾಣ: ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕೆಸಿಆರ್ ಅವರ ಸೊಂಟದ ಮೂಳೆ ಮುರಿದಿದೆ ಎನ್ನುವ ಸುದ್ದಿ ಲಭ್ಯವಾಗಿದೆ. ಸದ್ಯ ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಸಿಆರ್ ಅನಾರೋಗ್ಯದ ವಿಷಯ ತಿಳಿದ ತಕ್ಷಣ ಕುಟುಂಬಸ್ಥರೆಲ್ಲಾ ಆಸ್ಪತ್ರೆಗೆ ಧಾವಿಸಿದ್ದಾರೆ.
ಯಶೋಧಾ ಆಸ್ಪತ್ರೆಯ 9ನೇ ಮಹಡಿಯಲ್ಲಿ ಕೆಸಿಆರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ವೈದ್ಯರು ಪರೀಕ್ಷೆ ಮಾಡಿ ಹೆಲ್ತ್ ಬುಲೆಟಿನ್ ನೀಡಲಿದ್ದಾರೆ. ಸದ್ಯ ಕೆಸಿಆರ್ ಅವರ ಆರೋಗ್ಯ ಸ್ಥಿರವಾಗಿದೆ.