ಹೈದರಾಬಾದ್: ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ಮಗಳು ಮತ್ತು ಭಾರತ ರಾಷ್ಟ್ರ ಸಮಿತಿಯ ನಾಯಕಿ ಕಲ್ವಕುಂಟ್ಲ ಕವಿತಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು ಹೊಗಳಿದ್ದಾರೆ.
“ಈ ದೇವಾಲಯದ ಮೂಲಕ ಹಿಂದೂಗಳ ಕನಸು ನನಸಾಗಿದೆ” ಎಂದು ಕವಿತಾ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಕೋಟ್ಯಂತರ ಹಿಂದೂಗಳ ಕನಸು ನನಸಾಗಿರುವ ಶ್ರೀ ಸೀತಾರಾಮ ಚಂದ್ರ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸುತ್ತಿರುವ ಶುಭ ಸಮಯದಲ್ಲಿ ತೆಲಂಗಾಣದ ಜೊತೆಗೆ ದೇಶವೇ ಅದನ್ನು ಸ್ವಾಗತಿಸುತ್ತದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಗವಾನ್ ರಾಮನ ವಿಗ್ರಹವನ್ನು ಇರಿಸಲಾಗುವ ದೇವಾಲಯದ ಗರ್ಭಗುಡಿಯು ಪೂರ್ಣಗೊಳ್ಳುವ ಹಂತದಲ್ಲಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಶನಿವಾರ ಗರ್ಭಗುಡಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
“ಶ್ರೀ ರಾಮಲಾಲ ದೇವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ದೀಪಾಲಂಕಾರದ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ” ಎಂದು ಅವರು ತಮ್ಮ ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ.
శుభ పరిణామం..
అయోధ్యలో శ్రీ సీతారామ చంద్ర స్వామి వారి ప్రతిష్ట,
కోట్లాది హిందువుల కల నిజం కాబోతున్న శుభ సమయంలో…
తెలంగాణతో పాటు దేశ ప్రజలందరూ స్వాగతించాల్సిన శుభ ఘడియలు..జై సీతారామ్ pic.twitter.com/qzH7M32cQJ
— Kavitha Kalvakuntla (@RaoKavitha) December 10, 2023