ಹೈದರಾಬಾದ್: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಘಟನೆ ಸಂಬಂಧಿಸಿದಂತೆ ಆರೋಪಿಯ ತಾಯಿಯ ಮೇಲೆ ಪ್ರಕರಣ ದಾಖಲಾಗಿದೆ.
ಬಾಲಾಜಿ ನಗರ ಬಸ್ ನಿಲ್ದಾಣದ ಬಳಿ ಕಳೆದ ಭಾನುವಾರ ರಾತ್ರಿ 8.30ರ ಸುಮಾರಿಗೆ ಪೆದ್ದಮಾರಯ್ಯ ಎಂಬಾತ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಎಸೆದಿದ್ದ ಘಟನೆ ನಡೆದಿತ್ತು. ಈ ವೇಳೆ ಸ್ಕೂಟರ್ನಲ್ಲಿ ಹೋಗುತ್ತಿದ್ದ ಮತ್ತೊಬ್ಬ ಮಹಿಳೆ ಆತನನ್ನು ಪ್ರಶ್ನಿಸಲು ಮುಂದಾಗಿದ್ದೂ ಆಕೆಯ ಮೇಲೂ ಹಲ್ಲೆ ನಡೆಸಿದ್ದಾನೆ. ಸಂತ್ರಸ್ತೆ ಸುಮಾರು 15 ನಿಮಿಷಗಳ ಕಾಲ ವಿವಸ್ತ್ರವಾಗಿ ರಸ್ತೆಯಲ್ಲೇ ನಿಂತಿದ್ದರು.
ಈ ವೇಳೆ ಆರೋಪಿಯ ತಾಯಿ ನಾಗಮ್ಮ ಸ್ಥಳದಲ್ಲಿಯೇ ಇದ್ದರೂ ತಮ್ಮ ಮಗನ ಕುಕೃತ್ಯ ತಡೆಯಲು ಮುಂದಾಗಿರಲಿಲ್ಲ ಇದೇ ಕಾರಣಕ್ಕೆ ಬುಧವಾರ ರಾಚಕೊಂಡ ಪೊಲೀಸರು ನಾಗಮ್ಮನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.