ಹೈದರಾಬಾದ್: ರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಗುಂಪೊಂದು ರಾಮನ ಮೂರ್ತಿಯ ಮೆರವಣಿಗೆ ಹೊರಟಿದ್ದ ವೇಳೆ ಇಬ್ಬರು ಕಿಡಿಗೇಡಿಗಳು ಮೆರವಣಿಗೆ ಮೇಲೆ ಚಪ್ಪಲಿ ತೂರಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹಾತನೂರಿನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೆರವಣಿಗೆ ನಡೆಯುವ ವೇಳೆ ಪೊಲೀಸರು ಇದ್ದಿದ್ದರಿಂದ ಗುಂಪು ಘರ್ಷಣೆ ತಪ್ಪಿದೆ ಎಂದು ತಿಳಿದು ಬಂದಿದೆ.