ಹೈದರಾಬಾದ್: ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಡಿಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಿದೆ ಎಂದು ಟಿಡಿಪಿ ವಕ್ತಾರರಾದ ಜ್ಯೋತ್ಸ್ನಾ ತಿರುನಗರಿ ಹೇಳಿದ್ದಾರೆ. ಪಕ್ಷ ಯಾರನ್ನು ಬೆಂಬಲಿಸಬೇಕು ಎಂಬುದರ ಬಗ್ಗೆ ತೀರ್ಮಾನಿಸಿಲ್ಲ ಎಂದು ಅವರು ಹೇಳಿದರು.
ಆಂಧ್ರಪ್ರದೇಶದಲ್ಲಿ ಎನ್.ಡಿ.ಎ ಕೂಟದಲ್ಲಿರುವ ಟಿಡಿಪಿ ತೆಲಂಗಾಣದಲ್ಲಿ ಸ್ಪರ್ಧಿಸುವುದರಿಂದ ದೂರ ಉಳಿದಿದೆ. ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.