ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣ ನಾರ್ಕೆಟ್ಪಲ್ಲಿ-ಅದ್ದಂಕಿಯಲ್ಲಿ ನಡೆದಿದೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಯಾದಾದ್ರಿ ಭುವನಗಿರಿ ಜಿಲ್ಲೆಯ ಗೊಳ್ನೆಪಲ್ಲಿಯ ಭೂಮಾ ಮಹೇಂದರ್ (32) ಮತ್ತು ಅವರ ಮಗ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಮೃತಪಟ್ಟ ಭೂಮಾ ಮಹೇಂದರ್ ಅವರ ಪತ್ನಿ ಭೂಮಾ ಮಾಧವಿ ಎಂದು ಗುರುತಿಸಲಾಗಿದೆ.
ಅಪಘಾತದ ಸಮಯದಲ್ಲಿ ಸಂತ್ರಸ್ತರು ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದರು ಎಂದು ವರದಿಯಾಗಿದೆ. ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.