ತೆಲಂಗಾಣ: ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆಯನ್ನೇ ರದ್ದುಗೊಳಿಸಿದ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ. ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.
ಮದುವೆಯಲ್ಲಿ ಮಾಂಸದೂಟವನ್ನು ಏರ್ಪಡಿಸಿದ್ದರು, ಮಧುಮಗನ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಆದರೆ ಅತಿಥಿಗಳು ಮಾಂಸಾಹಾರಿ ಖಾದ್ಯ ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಗಲಾಟೆ ಶುರು ಮಾಡಿದ್ದರು. ಇದು ಎರಡೂ ಪಕ್ಷಗಳ ನಡುವೆ ಜಗಳಕ್ಕೆ ಕಾರಣವಾಯಿತು.
ವಧುವಿನ ಮನೆಯವರು ಮಾಂಸಾಹಾರದಲ್ಲಿ ಮೂಳೆಯನ್ನು ನೀಡದೆ ಅವಮಾನ ಮಾಡಿದ್ದಾರೆ. ವಧುವಿನ ಮನೆಯವರು ಈ ಬಗ್ಗೆ ಮೊದಲೇ ತಿಳಿಸಿರಲಿಲ್ಲ, ಮೂಳೆಯನ್ನು ಊಟದಲ್ಲಿ ಸೇರಿಸಲಿಲ್ಲ ಎಂದು ಜಗಳವಾಡಿದ್ದಾರೆ.
ಕೊನೆಗೆ ಎರಡೂ ಕಡೆಯವರು ತಮ್ಮ ತಮ್ಮ ಊರುಗಳಿಗೆ ತೆರಳಿ ಮದುವೆಯನ್ನೇ ರದ್ದುಗೊಳಿಸಿದ್ದಾರೆ.