News Karnataka Kannada
Sunday, April 28 2024
ತೆಲಂಗಾಣ

ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ

ಹೈದರಾಬಾದ್‌ನ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿ ತೆಲಂಗಾಣದ ಬುಡಕಟ್ಟು ಕಲ್ಯಾಣ ಅಭಿಯಂತರ ಇಲಾಖೆಯ ಮಹಿಳಾ ಕಾರ್ಯನಿರ್ವಾಹಕ ಇಂಜಿನೀಯರ್  84 ಸಾವಿರ ರೂ.ಗಳನ್ನ ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
Photo Credit : News Kannada

ಹೈದರಾಬಾದ್: ಹೈದರಾಬಾದ್‌ನ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿ ತೆಲಂಗಾಣದ ಬುಡಕಟ್ಟು ಕಲ್ಯಾಣ ಅಭಿಯಂತರ ಇಲಾಖೆಯ ಮಹಿಳಾ ಕಾರ್ಯನಿರ್ವಾಹಕ ಇಂಜಿನೀಯರ್  84 ಸಾವಿರ ರೂ.ಗಳನ್ನ ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.

ಮಹಿಳಾ ಕಾರ್ಯನಿರ್ವಾಹಕ ಇಂಜಿನೀಯರ್ ಅನ್ನು  ಕೆ.ಜಗಜ್ಯೋತಿ ಎಂದು ಗುರುತಿಸಲಾಗಿದೆ.

ಕಾರ್ಯನಿರ್ವಾಹಕ ಇಂಜಿನೀಯರ್ ಕೆ.ಜಗಜ್ಯೋತಿ ಅವರು ಬೋಡುಕರ್ ಗಂಗಣ್ಣ ಎಂಬ ಗುತ್ತಿಗೆದಾರರಿಂದ ₹84 ಸಾವಿರ ಲಂಚ ಪಡೆಯುತ್ತಿದ್ದರು. ಈ ವೇಳೆ ಅಲ್ಲಿಗೆ ದಾಳಿ ಇಟ್ಟ ಭ್ರಷ್ಟಾಚಾರ ವಿರೋಧಿ ಅಧಿಕಾರಿಗಳಿಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮಹಿಳಾ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ಗುತ್ತಿಗೆದಾರ ಮೊದಲೇ ಭ್ರಷ್ಟಾಚಾರ ವಿರೋಧಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ದುಡ್ಡು ತೆಗೆದುಕೊಳ್ಳುವಾಗ ಆನ್ ಕ್ಯಾಮೆರಾದಲ್ಲಿ ಎಲ್ಲ ದೃಶ್ಯಗಳು ಸೆರೆಯಾಗಿವೆ. ಈ ವೇಳೆ ಅಧಿಕಾರಿ ಜಗಜ್ಯೋತಿ ಕಣ್ಣೀರು ಹಾಕಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಬಳಿಕ ಜಗಜ್ಯೋತಿ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು ₹1.51 ಕೋಟಿ ಮೌಲ್ಯದ 3.6 ಕೆ.ಜಿ ಮೌಲ್ಯದ ಚಿನ್ನಾಭರಣಗಳು, ₹65.5 ಲಕ್ಷ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮನೆ, ಹೊಲ ಹಾಗೂ ಜಮೀನುಗಳ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು