Categories: ತೆಲಂಗಾಣ

ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ

ಹೈದರಾಬಾದ್: ಹೈದರಾಬಾದ್‌ನ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿ ತೆಲಂಗಾಣದ ಬುಡಕಟ್ಟು ಕಲ್ಯಾಣ ಅಭಿಯಂತರ ಇಲಾಖೆಯ ಮಹಿಳಾ ಕಾರ್ಯನಿರ್ವಾಹಕ ಇಂಜಿನೀಯರ್  84 ಸಾವಿರ ರೂ.ಗಳನ್ನ ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.

ಮಹಿಳಾ ಕಾರ್ಯನಿರ್ವಾಹಕ ಇಂಜಿನೀಯರ್ ಅನ್ನು  ಕೆ.ಜಗಜ್ಯೋತಿ ಎಂದು ಗುರುತಿಸಲಾಗಿದೆ.

ಕಾರ್ಯನಿರ್ವಾಹಕ ಇಂಜಿನೀಯರ್ ಕೆ.ಜಗಜ್ಯೋತಿ ಅವರು ಬೋಡುಕರ್ ಗಂಗಣ್ಣ ಎಂಬ ಗುತ್ತಿಗೆದಾರರಿಂದ ₹84 ಸಾವಿರ ಲಂಚ ಪಡೆಯುತ್ತಿದ್ದರು. ಈ ವೇಳೆ ಅಲ್ಲಿಗೆ ದಾಳಿ ಇಟ್ಟ ಭ್ರಷ್ಟಾಚಾರ ವಿರೋಧಿ ಅಧಿಕಾರಿಗಳಿಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮಹಿಳಾ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ಗುತ್ತಿಗೆದಾರ ಮೊದಲೇ ಭ್ರಷ್ಟಾಚಾರ ವಿರೋಧಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ದುಡ್ಡು ತೆಗೆದುಕೊಳ್ಳುವಾಗ ಆನ್ ಕ್ಯಾಮೆರಾದಲ್ಲಿ ಎಲ್ಲ ದೃಶ್ಯಗಳು ಸೆರೆಯಾಗಿವೆ. ಈ ವೇಳೆ ಅಧಿಕಾರಿ ಜಗಜ್ಯೋತಿ ಕಣ್ಣೀರು ಹಾಕಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಬಳಿಕ ಜಗಜ್ಯೋತಿ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು ₹1.51 ಕೋಟಿ ಮೌಲ್ಯದ 3.6 ಕೆ.ಜಿ ಮೌಲ್ಯದ ಚಿನ್ನಾಭರಣಗಳು, ₹65.5 ಲಕ್ಷ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮನೆ, ಹೊಲ ಹಾಗೂ ಜಮೀನುಗಳ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

Ashika S

Recent Posts

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

4 seconds ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

7 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

30 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

41 mins ago

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

60 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

1 hour ago