News Karnataka Kannada
Wednesday, May 08 2024
ತ್ರಿಪುರ

ತ್ರಿಪುರಾ ಮುಖ್ಯ ಮಂತ್ರಿಗಳ ಕೊಲೆಗೆ ಯತ್ನ ; ಮೂವರ ಬಂಧನ

Tripura Cm
Photo Credit :

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಿರುವುದಾಗಿ ಪೋಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರು ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಈ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ, ಪ್ರಯೋಜನವಾಗಿಲ್ಲ. ಈ ವೇಳೆ ಆರೋಪಿಗಳು ಪರಾರಿಯಾದರು. ನಂತರ ಈ ಮೂವರನ್ನು ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಮೂವರು 20ರ ಆಸುಪಾಸಿನ ಯುವಕರು ಎನ್ನಲಾಗಿದ್ದು ಯಾವುದಾದರೂ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ಪೋಲೀಸರು ತನಿಖೆ ನಡೆಸುತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು