ಅಗರ್ತಲಾ: 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 32 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ-ಐಪಿಎಫ್ಟಿ ಮೈತ್ರಿಕೂಟವು ತ್ರಿಪುರಾದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಬುಧವಾರ ಮಾಣಿಕ್ ಸಹಾ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
70ರ ಹರೆಯದ ಸಹಾ ಜೊತೆಗೆ ಮಹಿಳೆ ಸೇರಿದಂತೆ ಇತರ ಎಂಟು ಶಾಸಕರು ಒಟ್ಟು 12 ಮಂದಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರು ಮುಖ್ಯಮಂತ್ರಿ ಮತ್ತು ಇತರ ಸಚಿವರಾದ ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಸಂತಾನಾ ಚಕ್ಮಾ, ಸುಶಾಂತ ಚೌಧರಿ, ಟಿಂಕು ರಾಯ್, ಬಿಕಾಶ್ ದೆಬ್ಬರ್ಮಾ, ಸುಧಾಂಗ್ಶು ದಾಸ್, ಸುಕ್ಲಾ ಚರಣ್ ನೋಟಿಯಾ ಅವರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯನ್ನು ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿಗಳಾದ ಹಿಮಂತ ಬಿಸ್ವಾ ಶರ್ಮಾ (ಅಸ್ಸಾಂ), ಎನ್. ಬಿರೇನ್ ಸಿಂಗ್ (ಮಣಿಪುರ), ಪೆಮಾ ಖಂಡು (ಅರುಣಾಚಲ ಪ್ರದೇಶ), ಪ್ರೇಮ್ ಸಿಂಗ್ ತಮಾಂಗ್ (ಸಿಕ್ಕಿಂ) ಮತ್ತು ಹಲವಾರು ಗಣ್ಯರು ಸ್ವಾಮಿ ವಿವೇಕಾನಂದ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.